Breaking News

ಪಿಎಸ್​ಐ ನೇಮಕಾತಿ ಹಗರಣ: ಡಿವೈಎಸ್​ಪಿ, ಇನ್​ಸ್ಪೆಕ್ಟರ್​ ಸಿಐಡಿ ಬಲೆಗೆ

Spread the love

ಬೆಂಗಳೂರು/ ಕಲಬುರಗಿ: ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ಗಳ 545 ಹುದ್ದೆ ನೇಮಕಾತಿಯಲ್ಲಿ ಅಕ್ರಮ ಎಸಗಿರುವ ಪ್ರಕರಣದಲ್ಲಿ ಶಾಮೀಲಾಗಿರುವ ಡಿವೈಎಸ್​ಪಿ, ಇನ್​ಸ್ಪೆಕ್ಟರ್​ನನ್ನು ಸಿಐಡಿ ಕೊನೆಗೂ ಬಂಧಿಸಿದೆ. ಈ ಇಬ್ಬರಿಗೂ ಕೋಳ ತೊಡಿಸುವ ಮೂಲಕ ಬಂಧಿತರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.

ರಾಯಚೂರು ಜಿಲ್ಲೆ ಲಿಂಗಸೂಗುರು ಡಿವೈಎಸ್​ಪಿ ಮಲ್ಲಿಕಾರ್ಜುನ ಸಾಲಿ ಮತ್ತು ಬೆರಳಚ್ಚು ವಿಭಾಗದ ಇನ್​ಸ್ಪೆಕ್ಟರ್​ ಆನಂದ ಮೇತ್ರೆನನ್ನು ಕಲಬುರಗಿಯಲ್ಲಿ ವಿಚಾರಣೆಗಾಗಿ ಕರೆದು ಬಂಧಿಸಲಾಗಿದೆ. ಅದೇ ರೀತಿ ಮೈಸೂರು ರಸ್ತೆ ಕುಂಬಳಗೋಡು ಠಾಣೆ ಕಾನ್​ಸ್ಟೇಬಲ್​ ಸೋಮನಾಥ್​ ಮತ್ತು ಕೆಂಗೇರಿ ಹೋಬಳಿ ಚಿನ್ನಕುರ್ಚಿ ಗ್ರಾಮದ ಸಿ.ಜಿ. ರಾವೇಂದ್ರ ಎಂಬಾತನನ್ನು ಬಂಧಿಸಿದ್ದಾರೆ. ಹೈಗ್ರೌಂಡ್ಸ್​ ಠಾಣೆಯಲ್ಲಿ ದಾಖಲಾಗಿದ್ದ ಎ​ಐಆರ್​ಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ 15 ಆರೋಪಿಗಳನ್ನು ಬಂಧಿಸಲಾಗಿದೆ. ಕಲಬುರಗಿಯಲ್ಲಿ 31 ಆರೋಪಿಗಳು ಸೇರಿ ರಾಜ್ಯದಲ್ಲಿ ಒಟ್ಟಾರೆ 46 ಮಂದಿಯನ್ನು ಸಿಐಡಿ ಬಲೆಗೆ ಬಿದ್ದಿದ್ದಾರೆ. ಇದರಲ್ಲಿ 9 ಮಂದಿ ಪೊಲೀಸರಿದ್ದಾರೆ.

ಮೈಸೂರು ರಸ್ತೆ ಕೆಂಗೇರಿ ಹೋಬಳಿ ಕುಂಬಳಗೋಡು ಸಮೀಪದ ಚಿನ್ನಕುರ್ಚಿ ಗ್ರಾಮದ ಸಿ.ಎಂ. ನಾಗರಾಜ್​, ಈತನ ಸಹೋದರ ಸಿ.ಎಂ. ನಾರಾಯಣ ಹಾಗೂ ಸಿ.ಜಿ. ರಾವೇಂದ್ರ ವಿರುದ್ಧ ಒಎಂಆರ್​ ಶೀಟ್​ ತಿದ್ದಿದ ಆರೋಪದ ಮೇಲೆ ಹೈಗ್ರೌಂಡ್ಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗಿದ್ದ ನಾಗರಾಜನನ್ನು ಬಂಧಿಸಲಾಗಿತ್ತು. ಗುರುವಾರ ರಾವೇಂದ್ರನನ್ನು ಬಂಧಿಸಿದ್ದು, ನಾರಾಯಣ ಪತ್ತೆಗೆ ಬಲೆಬೀಸಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಸರ್ಕಾರಿ ಕೆಲಸಕ್ಕೆ ಸಿದ್ಧತೆ ನಡೆಸಿದ್ದ ಸಹೋದರರು ಎಸ್​ಐ ನೇಮಕಾತಿ ವಿಚಾರ ತಿಳಿದು ಬೆಂಗಳೂರು ಮೂಲದ ಪ್ರಭಾವಿ ವ್ಯಕ್ತಿ ಮೂಲಕ ಎಸ್​ಐ ಹುದ್ದೆಯ ಡೀಲ್​ ಕುದುರಿಸಿದ್ದರು. ಊರಿನಲ್ಲಿ ಕುಟುಂಬಕ್ಕಿದ್ದ 1 ಎಕರೆ ಜಮೀನನ್ನು ಮಾರಾಟ ಮಾಡಿ ಹಣ ಕೊಟ್ಟಿದ್ದರು. ಬೆಂಗಳೂರಿನ ಪರೀಾ ಕೇಂದ್ರದಲ್ಲಿ ಮೂವರು ಲಿಖಿತ ಪರೀೆ ಬರೆದಿದ್ದರು. ಮೂವರೂ ತಾತ್ಕಾಲಿಕ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ