Breaking News
Home / ರಾಜಕೀಯ / ಬಿಜೆಪಿಗೆ ಯತ್ನಾಳ್​ ಶಾಕ್: ಸಿಎಂ ಪದವಿಗೆ 2500 ಕೋಟಿ , ಪೇಚು ತಂದ ಗಂಭೀರ ಆರೋಪ​

ಬಿಜೆಪಿಗೆ ಯತ್ನಾಳ್​ ಶಾಕ್: ಸಿಎಂ ಪದವಿಗೆ 2500 ಕೋಟಿ , ಪೇಚು ತಂದ ಗಂಭೀರ ಆರೋಪ​

Spread the love

ಬೆಂಗಳೂರು: ಸಾರ್ವತ್ರಿಕ ಚುನಾವಣೆಗೆ ಸಜ್ಜಾಗುತ್ತಿರುವ ಸಂದರ್ಭದಲ್ಲೇ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಪಕ್ಷದ ವಿರುದ್ಧ ಮಾಡಿರುವ ಗಂಭೀರ ಆರೋಪ ಬಿಜೆಪಿ ಕೇಂದ್ರ ಹಾಗೂ ರಾಜ್ಯ ನಾಯಕತ್ವಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ. ಈ ಬೆಳವಣಿಗೆ ಪದ ರಾಜ್ಯ ಟಕದಲ್ಲಿ ಹಿಡಿತವಿಲ್ಲದ ನಾಯಕತ್ವವನ್ನು ಸಾಬೀತುಪಡಿಸುವ ಜತೆಯಲ್ಲೇ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾದ ಉಸ್ತುವಾರಿಯಿಂದ ಸಂಟನೆಯಲ್ಲಿ ಶಿಸ್ತು ದೂರಾಗಿ ಪದ ಕಾರ್ಯಕರ್ತರಿಗೂ ಇರುಸುಮುರಿಸು ಉಂಟು ಮಾಡಿದೆ.

 

ಪ್ರತಿ ನಿತ್ಯ ಒಂದಿಲ್ಲೊಂದು ಹೇಳಿಕೆಗಳಿಂದಲೇ ಸರ್ಕಾರಕ್ಕೆ ಮುಜುಗರ ಉಂಟುಮಾಡುತ್ತ ಬಂದಿರುವ ಯತ್ನಾಳ್​, ರಾಮದುರ್ಗ ತಾಲೂಕಿನಲ್ಲಿ ಜರುಗಿದ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಸಮಾವೇಶದಲ್ಲಿ ಮಾತನಾಡುತ್ತ, ‘ದೆಹಲಿಯಿಂದ ಬಂದ ಕೆಲವು ಲೀಡರ್​ಗಳು 2500 ಕೋಟಿ ರೂ. ಕೊಡಿ, ಸಿಎಂ ಮಾಡ್ತೀವಿ ಅಂದಿದ್ರು’ ಎನ್ನುವ ಮೂಲಕ ಪ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಯತ್ನಾಳ್​ ಅವರ ಈ ಹೇಳಿಕೆಗೆ ಪಕ್ಷದ ನಾಯಕರು ನಿರುತ್ತರರಾಗಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಮೆತ್ತಿಕೊಂಡಿರುವ ಪರ್ಸೆಂಟೇಜ್​, ನೇಮಕಾತಿ ಹಗರಣಗಳ ಕಳಂಕದಿಂದ ಹೊರಬರಲು ಪರದಾಡುತ್ತಿರುವ ಸಂದರ್ಭದಲ್ಲಿಯೇ ಯತ್ನಾಳ್​ಅವರ ಈ ಆರೋಪ ನಾಯಕತ್ವಕ್ಕೆ ಕಪುಚುಕ್ಕೆಯನ್ನಿಟ್ಟಿದೆ. ಪ್ರತಿಪಕ್ಷಗಳ ಕೈಗೂ ಅಸ್ತ್ರ ದೊರಕಿಸಿಕೊಟ್ಟಿದೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ