Breaking News

ಗೋಕಾಕ ಹಾಗೂ ಮೂಡಲಗಿ ರೈತರು ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

Spread the love

ಬೆಳಗಾವಿ: ಘಟಪ್ರಭಾ ಮೇಲ್ದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಜಿಲ್ಲೆಯ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕುಗಳ ರೈತರು ಇಲ್ಲಿನ ಕ್ಲಬ್‌ ರಸ್ತೆಯಲ್ಲಿರುವ ನೀರಾವರಿ ನಿಗಮದ ಕಚೇರಿ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿ, ಬಳಿಕ ಪ್ರಾದೇಶಿಕ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿದರು.

 

ಬೇಸಿಗೆ ಹಿನ್ನೆಲೆಯಲ್ಲಿ ಜನ-ಜಾನುವಾರಿಗೆ ನೀರಿನ ಅವಶ್ಯಕತೆ ಇದೆ. ನೀರಿಲ್ಲದೆ ಬಹಳಷ್ಟು ತೊಂದರೆ ಅನುಭವಿಸುತ್ತಿದ್ಧೇವೆ. ಪ್ರತಿ ನಿತ್ಯ 2ಸಾವಿರ ಕ್ಯುಸೆಕ್ ನೀರನ್ನು ಕಾಲುವೆಗೆ ಹರಿಸಬೇಕು’ ಎಂದು ಒತ್ತಾಯಿಸಿದರು.

‘ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ಬೇಸಿಗೆ ಕಾಲದಲ್ಲಿ ನಿತ್ಯ 2ಸಾವಿರ ಕ್ಯುಸೆಕ್ ನೀರು ಹರಿಸುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ನಿಗಮದ ಮುಖ್ಯ ಎಂಜಿನಿಯರ್‌ಗೆ ಮೊಬೈಲ್‌ ಫೋನ್‌ ಮೂಲಕ ತಿಳಿಸಿದ್ದೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಆದರೆ, ಅಧಿಕಾರಿಗಳು ನೀರು ಬಿಡದೆ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಜಲಾಶಯದಲ್ಲಿ ನೀರು ಸಂಗ್ರಹವಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ; ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ’ ಎಂದು ಆರೋಪಿಸಿದರು.


Spread the love

About Laxminews 24x7

Check Also

ಶಾಸಕ ಭರಮಗೌಡ (ರಾಜು) ಕಾಗೆಗೆ ಒಲಿದು ಬಂದ ಅದೃಷ್ಟ

Spread the love  ಸಚಿವ ಸತೀಶ್ ಜಾರಕಿಹೊಳಿಯವರ ಮಧ್ಯಸ್ಥಿಕೆಯಲ್ಲಿ ನಡೆದ ಕಾಗವಾಡ ಕ್ಷೇತ್ರದ ಅವಿರೋಧ ಆಯ್ಕೆ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ