Breaking News

ಕ್ಯಾಸಿನೋ ಕಾರ್ಯಕ್ರಮಕ್ಕೆ ನಾನು ಮುಖ್ಯ ಅತಿಥಿಯಾಗಿ ಹೋಗಿದ್ದೆ. ವಿವೇಕ್ ಒಬೇರಾಯ್ ನನ್ನ ಪಕ್ಕ ನಿಂತಿದ್ದರು, ಉಪೇಂದ್ರ ಸಹ ಭಾಗವಹಿಸಿದ್ದರು

Spread the love

ಬೆಂಗಳೂರು: ನಮ್ಮ ಅಮ್ಮನ ಹಾರ್ಟ್ ವೀಕ್, ಈಗಾಗಲೇ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಶಾಂತ್ ಸಂಬರಗಿ ಇನ್ನಾ ಮಾತನಾಡಿ ನಮ್ಮ ಅಮ್ಮಗೆ ಏನಾದರೂ ಆದರೆ ನಾನು ಸತ್ತೋದರೂ ಅವನನ್ನು ನಾನು ಬಿಡಲ್ಲ ಎಂದು ನಟಿ ಸಂಜನಾ ಕಣ್ಣೀರು ಹಾಕಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ನಟಿ ಸಂಜನಾ, ಕ್ಯಾಸಿನೋ ಕಾರ್ಯಕ್ರಮಕ್ಕೆ ನಾನು ಮುಖ್ಯ ಅತಿಥಿಯಾಗಿ ಹೋಗಿದ್ದೆ. ವಿವೇಕ್ ಒಬೇರಾಯ್ ನನ್ನ ಪಕ್ಕ ನಿಂತಿದ್ದರು, ಉಪೇಂದ್ರ ಸಹ ಭಾಗವಹಿಸಿದ್ದರು. ಎಲ್ಲಾ ರಾಜ್ಯಗಳಿಂದ 200 ಜನ ಪ್ರತಿನಿಧಿಸಿದ್ದರು. ಹೀಗಾಗಿ ಊಹಾಪೋಹಾಗಳನ್ನು ಮಾತನಾಡಬೇಡಿ. ನಮ್ಮ ಅಮ್ಮಗೆ ಎದೆ ನೋವು ಕಾಣಿಸಿಕೊಂಡಿದೆ. ಅವರಿಗೆ ಏನಾದರೂ ಆದರೆ ನಾನು ಬಿಡಲ್ಲ. ನಾನು ಒಂದು ಹೆಣ್ಣು, ನನಗೆ ಇನ್ನೂ ಮದುವೆಯಾಗಿಲ್ಲ. ನನ್ನ ಕಾರೆಕ್ಟರ್ ಬಗ್ಗೆ ಮಾತನಾಡಲು ಅವರು ಯಾರು ಎಂದು ಪ್ರಶ್ನಿಸಿ ಸಂಜನಾ ಆಕ್ರೋಶ ಹೊರ ಹಾಕಿದರು.ಜಮೀರ್ ಅವರು ಯಾರು ಅಂತಾನೇ ಗೊತ್ತಿಲ್ಲ. ಜಮೀರ್ ಅಹ್ಮದ್ ಸರ್ ದಯವಿಟ್ಟು ಪ್ರಶಾಂತ್ ಸಂಬರಗಿ ಅವರನ್ನು ಸುಮ್ಮನೇ ಬಿಡಬೇಡಿ. ಆ ಬೀದಿ ನಾಯಿ ನನ್ನ ಹಿಂದೆ ಯಾಕೆ ಬಿದ್ದಿದ್ದಾನೆ ಗೊತ್ತಿಲ್ಲ. ನಾನು ತುಂಬಾ ಕಷ್ಟಪಟ್ಟು ಮೇಲೆ ಬಂದ ಕಲಾವಿದೆ. ಆದರೆ ಇದರಲ್ಲಿ ನನ್ನ ತಪ್ಪು ಏನಿದೆ. ನಾನು ಸೆಲೆಬ್ರಿಟಿ ಆಗಿರೋದೆ ತಪ್ಪಾ. ನನಗೆ ತುಂಬಾ ಕಷ್ಟ ಆಗುತ್ತಿದೆ. ದಯವಿಟ್ಟು ಪ್ರಶಾಂತ್ ಸಂಬರಗಿಯನ್ನು ಬಿಡಬೇಡಿ ಎಂದು ಕೈ ಮುಗಿದು ಕಣ್ಣೀರು ಹಾಕಿದರು


Spread the love

About Laxminews 24x7

Check Also

“ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ”ದ ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ ನೀಡಿದ ಡಿ ಕೆ ಶಿವಕುಮಾರ್

Spread the loveಬೆಂಗಳೂರು: ಸುಗಮ ಮತ್ತು ಸುರಕ್ಷಿತ ರಸ್ತೆ ಖಾತರಿ ನಿಟ್ಟಿನಲ್ಲಿ ಬಿಬಿಎಂಪಿಯು ಕೇಂದ್ರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ “ನಮ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ