Breaking News

ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಬೆಳಗಾವಿ-ಹುನಗುಂದ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು’: ರೈತರ ಪ್ರತಿಭಟನೆ

Spread the love

ಬೆಳಗಾವಿ: ‘ಭಾರತಮಾಲಾ ಯೋಜನೆಯಲ್ಲಿ ಕೈಗೊಳ್ಳುತ್ತಿರುವ ಪಣಜಿ-ಹೈದರಾಬಾದ್ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಬೆಳಗಾವಿ-ಹುನಗುಂದ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು’ ಎಂದು ಒತ್ತಾಯಿಸಿ ರೈತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಬಳಿಕ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

‘ಈ ಹೆದ್ದಾರಿ ನಿರ್ಮಾಣಕ್ಕಾಗಿ ಸರ್ಕಾರ ಬೆಳಗಾವಿ ತಾಲ್ಲೂಕಿನ ಬಸ್ತವಾಡ, ಕಮಕಾರಟ್ಟಿ, ಶಗನಮಟ್ಟಿ, ತಾರೀಹಾಳ, ಚಂದನಹೊಸೂರ, ಗಣಿಕೊಪ್ಪ, ಮರಿಕಟ್ಟಿ, ಹಣ್ಣಿಕೇರಿ, ಜಕನಾಯ್ಕನಕೊಪ್ಪ, ನಾಗನೂರ ಮತ್ತಿತರ ಗ್ರಾಮಗಳ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಈಗಾಗಲೇ ಹಲವು ಕೈಗಾರಿಕೆಗಳು ಮತ್ತು ರಸ್ತೆಗಳ ನಿರ್ಮಾಣಕ್ಕೆ ಭೂಮಿ ನೀಡಿದ್ದೇವೆ. ಈಗ ಬದುಕಿಗೆ ಆಸರೆಯಾಗಿರುವ ಅತ್ಯಲ್ಪ ಕೃಷಿ ಜಮೀನನ್ನೂ ಸ್ವಾಧೀನಪಡಿಸಿಕೊಳ್ಳಬಾರದು’ ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ