Breaking News

ಮೇ 11ರಂದು ಬೆಳಗಾವಿಯಲ್ಲಿ ಶರದ್‌ ಪವಾರ್‌ ಪ್ರವಾಸ

Spread the love

ಬೆಳಗಾವಿ: ‘ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರು ಮೇ 11ರಂದು ಬೆಳಗಾವಿಗೆ ಭೇಟಿ ನೀಡಲಿದ್ದು, ಅಂದು ಚನ್ನಮ್ಮ ವೃತ್ತದಲ್ಲಿ ಸತ್ಕರಿಸಲಾಗುವುದು’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಆರ್.ಹರಿ ತಿಳಿಸಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಪವಾರ್‌ ಅವರು ನಗರದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ’ ಎಂದರು.

 

‘ಮುಂಬರುವ ಪ್ರತಿ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ 18 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಹಾಕಲಾಗುವುದು. ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ’ ಎಂದರು.

‘ಬಿಜೆಪಿ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಅದರ ವಿರುದ್ಧ ಹೋರಾಟ ನಡೆಸಲಾಗುವುದು’ ಎಂದು ತಿಳಿಸಿದರು.

ಮುಖಂಡರಾದ ಅಮೋಲ ದೇಸಾಯಿ, ಕೆ.ಜಿ. ಪಾಟೀಲ, ನಾರಾಯಣ ಬಸರಗಿ, ದುರ್ಗೇಶ ಮೇತ್ರಿ, ಅಪ್ಪಾಸಾಹೇಬ ನಾಯಕ, ಸುರೇಂದ್ರ ಪಾಲ್ಗೊಂಡಿದ್ದರು.

 


Spread the love

About Laxminews 24x7

Check Also

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Spread the love ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ