Breaking News

ಅಸನಿ ಚಂಡಮಾರುತದಿಂದಾಗಿ ವಾತಾವರಣ ಕೂಲ್ ಕೂಲ್

Spread the love

ಬೆಂಗಳೂರು: ಅಸನಿ ಚಂಡಮಾರುತ ಎಫೆಕ್ಟ್ ನಿಂದಾಗಿ ಬೆಂಗಳೂರಿನ ವಾತಾವರಣ ಕಂಪ್ಲೀಟ್ ಕೂಲ್ ಆಗಿದೆ. ಇಂದು ಕೂಡ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮೋಡದ ಮರೆಯಲ್ಲೇ ಸೂರ್ಯ ದೇವನ ಜಾರಿಹೋಗಲಿದ್ದಾನೆ.

ಬಂಗಾಳಕೊಲ್ಲಿಯನ್ನ ತೀವ್ರ ವಾಯುಭಾರ ಕುಸಿತದಿಂದ ಉಂಟಾಗಿರುವ ಅಸನಿ ಚಂಡಮಾರುತದ ಎಫೆಕ್ಟ್ ನಿಂದ ರಾಜ್ಯದ ಹಲವು ಕಡೆ ಜೋರು ಮಳೆ ಆಗ್ತಿದೆ. ಬೆಂಗಳೂರಿನಲ್ಲೂ ಚಂಡಮಾರುತದ ಪರಿಣಾಮ ಬೇಸಿಗೆ ಬೇಗೆಯಿಂದ ತತ್ತರಿಸಿದ್ದ ಜನರಿಗೆ ತಂಪೆರೆದಿದೆ. ನಗರದಲ್ಲಿ ನೆನ್ನೆಯಿಂದಲೂ ಸಹ ಮೋಡ ಕವಿದ ವಾತಾವರಣವಿದೆ. ನಿನ್ನೆ ನಗರದ ಬಹು ಭಾಗಗಳಲ್ಲಿ ಗಾಳಿ ಜೊತೆಗೆ ತುಂತುರು ಮಳೆ ಆಗಿತ್ತು. ಇಂದು ಸಹ ಅಂತಹದ್ದೆ ಪರಿಸ್ಥಿತಿ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Spread the love

About Laxminews 24x7

Check Also

ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

Spread the love ನವದೆಹಲಿ: ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಕೇಂದ್ರ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ