Breaking News

ಕರ್ನಾಟಕದ ನಾಲ್ಕು ‘ರಾಜ್ಯಸಭಾ ಸ್ಥಾನ’ಗಳಿಗೆ ಚುನಾವಣೆ ಘೋಷಣೆ: ಜೂ.10ರಂದು ಮತದಾನ, ಅಂದೇ ಫಲಿತಾಂಶ |

Spread the love

ನವದೆಹಲಿ: ದಿನಾಂಕ 30-06-2022ರಂದು ನಿವೃತ್ತಿಯಾಗಲಿರುವಂತ ಕರ್ನಾಟಕದಿಂದ ರಾಜ್ಯಸಭೆಗೆ ( Rajya Sabha ) ಆಯ್ಕೆಯಾಗಿದ್ದಂತ ನಾಲ್ಕು ಸ್ಥಾನಗಳು ಸೇರಿದಂತೆ ದೇಶದ 15 ರಾಜ್ಯಗಳ 57 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ ಮಾಡಲಾಗಿದೆ.

ಈ ಸಂಬಂಧ ಚುನಾವಣಾ ಆಯೋಗ ( Election Commission of India – ECI) ಆದೇಶ ಹೊರಡಿಸಿದ್ದು, ದಿನಾಂಕ 30-06-2022ರಂದು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಂತ ಕೆಸಿ ರಾಮಮೂರ್ತಿ, ಜೈರಾಂ ರಮೇಶ್, ಆಸ್ಕರ್ ಫರ್ನಾಂಡಿಸ್, ನಿರ್ಮಲಾ ಸೀತಾರಾಮನ್ ಅವರು ನಿವೃತ್ತಿ ಹೊಂದಲಿದ್ದಾರೆ. ಈ ಸ್ಥಾನಗಳಿಗೆ ದಿನಾಂಕ 10-06-2022ರಂದು ಚುನಾವಣೆ ನಿಗದಿಗೊಳಿಸಲಾಗಿದೆ.ದಿನಾಂಕ 24-05-2022ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ. ದಿನಾಂಕ 31-05-2022ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ದಿನಾಂಕ 01-06-2022ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ದಿನಾಂಕ 03-06-2022ರಂದು ನಾಮಪತ್ರಗಳನ್ನು ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ.


Spread the love

About Laxminews 24x7

Check Also

26 ಕರ್ನಾಟಕ ಎನ್‌ಸಿಸಿ ಬಟಾಲಿಯನ್ ವಾರ್ಷಿಕ ಶಿಬಿರದಲ್ಲಿ ರಕ್ತದಾನ ರಕ್ತದಾನ ಶ್ರೇಷ್ಠ ದಾನ: ಕರ್ನಲ್ ಸುನಿಲ್ ದಾಗರ

Spread the love ಬೆಳಗಾವಿ 25: ಸರ್ವದಾನಗಳಲ್ಲಿ ರಕ್ತದಾನ ಮಹಾದಾನವಾಗಿದೆ. ರಕ್ತದಾನವನ್ನು ಮಾಡುವುದರಿಂದ ಒಬ್ಬ ರೋಗಿಯ ಜೀವನ ಉಳಿಸಲು ಸಾಧ್ಯ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ