Breaking News

‘ಯಾವುದೇ ಕಾಯಕವನ್ನು ನಿಷ್ಠೆಯಿಂದ ಮಾಡಿದರೆ ನಿಶ್ಚಿತವಾಗಿ ಸಫಲತೆ ಸಿಗುತ್ತದೆ’ ಎಂದ, ನಾಗನೂರ ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ

Spread the love

ಬೆಳಗಾವಿ: ‘ಯಾವುದೇ ಕಾಯಕವನ್ನು ನಿಷ್ಠೆಯಿಂದ ಮಾಡಿದರೆ ನಿಶ್ಚಿತವಾಗಿ ಸಫಲತೆ ಸಿಗುತ್ತದೆ’ ಎಂದು ನಾಗನೂರ ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.

ಇಲ್ಲಿನ ಶಿವಬಸವ ನಗರದ ಡಾ.ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಅಂಚೆ ಇಲಾಖೆ ಬೆಳಗಾವಿ ವಿಭಾಗ ಗುರುವಾರ ಏರ್ಪಡಿಸಿದ್ದ ಸಾಧಕರಿಗೆ ಕರ್ಮಯೋಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

 

‘ಕಾಯಕವೇ ಕೈಲಾಸವೆಂದು ಶರಣರು ಬಣ್ಣಿಸಿದ್ದಾರೆ. ಆದರೆ, ನಮ್ಮ ಕಾಯಕದಲ್ಲಿ ಯಾವುದೇ ಅಪೇಕ್ಷೆ ಇರಬಾರದು. ಕರ್ಮಯೋಗಿಗಳು ನಿಸ್ವಾರ್ಥ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದ ಅವರು, ‘ಇದು ಹೈಟೆಕ್‌ ಯುಗ. ಇದಕ್ಕೆ ತಕ್ಕಂತೆ ಅಂಚೆ ಕಚೇರಿಗಳೂ ಬದಲಾಗುತ್ತಿವೆ. ಕಡಿಮೆ ವೇತನದಿಂದ ದುಡಿಮೆ ಆರಂಭಿಸಿದವರು ಇಂದು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ