Breaking News

ಹೆದ್ದಾರಿ ದರೋಡೆ: ಆರು ಜನರ ಬಂಧನ

Spread the love

ಗುತ್ತಲ: ದರೋಡೆ ಆರೋಪದ ಮೇಲೆ ಆರು ಮಂದಿಯನ್ನು ಗುತ್ತಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಮಧ್ಯರಾತ್ರಿ ರಾಣೆಬೆನ್ನೂರ ಕಡೆಯಿಂದ ಗುತ್ತಲ ಕಡೆಗೆ ಬರುತ್ತಿದ್ದ ಬೊಲೆರೊ ವಾಹನವನ್ನು ಪಟ್ಟಣದ ಹೊರವಲಯದ ಕುರಗೂಂದ ಕ್ರಾಸ್ ಹತ್ತಿರ ತಡೆದು ಪರಿಶೀಲನೆ ಮಾಡಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

 

ಶಿವರಾಜ ಮೊಡಿಕಾರ, ಪರಶುರಾಮ ಮೊಡಿಕಾರ, ಚಿರಂಜೀವಿ ಮೊಡಿಕೇರ, ಗಾಳೇಪ್ಪ ನಾಸಿಕ್, ಗುಡದಯ್ಯ ಮೊಡಿಕೇರ ಬಂಧಿತರು. ಮಚ್ಚು, 2 ಬಡಿಗೆ, ಕಾರದಪುಡಿ ಹಾಗೂ ವಾಹನ ವಶಪಡಿಸಿಕೊಳ್ಳಲಾಗಿದೆ.

ಪಟ್ಟಣದಲ್ಲಿ ನಡೆದ ದರೋಡೆ ಪ್ರಕರಣಗಳಲ್ಲಿ ಆರೋಪಿಗಳ ಪಾತ್ರವಿದೆ. ಇಂತಹ ಇನ್ನೊಂದು ತಂಡವನ್ನು ಪತ್ತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಪಿಎಸ್‌ಐ ಜಿ. ಜಗದೀಶ ತಿಳಿಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ