Breaking News

ಮಾತುಕತೆ ಯಶಸ್ವಿ, ಜಿ.ಟಿ ದೇವೇಗೌಡರು ಬಿಜೆಪಿಗೆ??

Spread the love

ಮೈಸೂರು ಭಾಗದಲ್ಲಿ ಪ್ರಬಲ ನಾಯಕರಾಗಿರುವ ಜಿ.ಟಿ ದೇವೇಗೌಡರನ್ನು(GT Devegowda) ಬಿಜೆಪಿಗೆ(BJP) ಸೆಳೆಯಲು ಕಮಲ ಪಾಳಯದಲ್ಲಿ ಭರ್ಜರಿ ಕಸರತ್ತು ನಡೆದಿದೆ.

ಈಗಾಗಲೇ ಜೆಡಿಎಸ್‍ನಿಂದ ಒಂದು ಕಾಲು ಹೊರಗಿಟ್ಟಿರುವ ಜಿ.ಟಿ ದೇವೇಗೌಡರನ್ನು ಸೆಳೆಯಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ನಿರಂತರ ಮಾತುಕತೆ ನಡೆಸುತ್ತಿವೆ. ಇದೀಗ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್(ST Somashekar) ಮತ್ತು ಜಿ.ಟಿ ದೇವೇಗೌಡರು(GT Devegowda) ಮೈಸೂರಿನಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಿಜೆಪಿ ಸೇರಲು ಜಿ.ಟಿ ದೇವೇಗೌಡರು ಈಗಾಗಲೇ ಅನೇಕ ಷರತ್ತುಗಳನ್ನು ವಿಧಿಸಿದ್ದಾರೆ.

ನಾನು ಬಿಜೆಪಿಗೆ ಸೇರಿದರೆ ನನ್ನ ಮಗ ಹರೀಶ್‍ಗೌಡನಿಗೂ ಟಿಕೆಟ್ ನೀಡಬೇಕು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನನ್ನನ್ನು ಮಂತ್ರಿ ಮಾಡಬೇಕೆಂಬ ಬೇಡಿಕೆಯನ್ನು ಜಿ.ಟಿ ದೇವೇಗೌಡರು ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ವಿಜಯನಗರದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿಯೂ ಈ ಕುರಿತು ಚರ್ಚೆ ನಡೆದಿದೆ. ಹಳೆ ಮೈಸೂರು ಭಾಗದಲ್ಲಿರುವ ಪ್ರಬಲ ನಾಯಕರನ್ನು ಬಿಜೆಪಿಗೆ ಸೆಳೆಯುವಂತೆ ಅಮಿತ್ ಶಾ ಮತ್ತು ಜೆ.ಪಿ ನಡ್ಡಾ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ