ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಚಿವ ಸಂಪುಟ ಸೇರ್ಪಡೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ವಿಜಯೇಂದ್ರಗೆ ಸಚಿವ ಸ್ಥಾನ ನೀಡುವಂತೆ ಕೋರ್ ಕಮಿಟಿ ಸಭೆಯಲ್ಲಿ ಯಡಿಯೂರಪ್ಪ ಒತ್ತಾಯಿಸಿದ್ದರು.
ಲಿಂಗಾಯತ ಮತಬ್ಯಾಂಕ್ ಉಳಿಸಿಕೊಳ್ಳಬೇಕಾದರೆ, ವಿಜಯೇಂದ್ರಗೆ ಸಚಿವ ಸ್ಥಾನ ನೀಡಿ ಒತ್ತಡ ಹಾಕಿದ್ದರು. ಇದೀಗ ಬಿ.ವೈ.ವಿಜಯೇಂದ್ರಗೆ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ವರಿಷ್ಠರು ಭರವಸೆ ನೀಡಿದ್ದಾರೆ. ಆದರೆ, ಇಂತದ್ದೇ ಖಾತೆಬೇಕೆಂದು ಹಠ ಹಿಡಿಯುವಂತಿಲ್ಲ ಎಂದಯ ಕಂಡೀಷನ್ ಹಾಕಿದ್ದಾರೆ. ಕೊಟ್ಟ ಖಾತೆಯನ್ನ ಒಪ್ಪಿಕೊಳ್ಳಬೇಕು. ಸರ್ಕಾರದಲ್ಲಿ ಕೈಯಾಡಿಸಬಾರದು ಎಂದು ತಿಳಿಸಿದ್ದಾರೆ.
ವಿಜಯೇಂದ್ರಗೆ ಯಾವುದೇ ಕೊಟ್ಟರೂ ಸರಿಯೇ? ಅದನ್ನೇ ಸಮರ್ಥವಾಗಿ ನಿಭಾಯಿಸುತ್ತಾನೆ ಎಂದು ಬಿಎಸ್ವೈ ಪಕ್ಷದ ವರಿಷ್ಠರಿಗೆ ಭರವಸೆ ನೀಡಿದ್ದಾರೆ.