ಬೆಳಗಾವಿ: ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಬೆಳಗಾವಿ ಗಡಿ ಪ್ರದೇಶದಲ್ಲಿರುವ 7 ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಸಂಖ್ಯಾತ ಮರಾಠಿ ಮತದಾರರ ಮೇಲೆ ಹಿಡಿತ ಸಾಧಿಸಿ ಯಶಸ್ವಿಯಾಗಿದ್ದ ಬಿಜೆಪಿಗೆ ಇದೀಗ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ ಚಿಂತೆಗೀಡಾಗುವಂತೆ ಮಾಡಿದೆ.
2023ರ ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ಅಥಣಿ, ನಿಪಾಣಿ, ಕಾಗವಾಡ, ಖಾನಾಪುರ, ಬೆಳಗಾವಿ ಗ್ರಾಮಾಂತರ, ಬೆಳಗಾವಿ ದಕ್ಷಿಣ ಮತ್ತು ಬೆಳಗಾವಿ ಉತ್ತರ — ಅಂತರರಾಜ್ಯ ಗಡಿ ಭಾಗದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಮರಾಠಿ ಮತಗಳ ಮೇಲೆ ಕಣ್ಣಿಟ್ಟಿರುವ ಶರದ್ ಪವಾರ್ ಅವರ, ಎಂಇಎಸ್ಗೆ ಬೆಂಬಲ ನೀಡುವ ನಿರೀಕ್ಷೆಯಿದೆ. ಈ ಹಿನ್ನಲೆಯಲ್ಲಿ ಶರದ್ ಪವಾರ್ ಹಾಗೂ ಎಂಇಎಸ್ ನಾಯಕರು ಭೇಟಿ ಮಾಡಿರುವುದು ಬಿಜೆಪಿ ಚಿಂತೆಗೆ ಕಾರಣವಾಗಿದೆ.
ಎಲ್’ಕೆ ಅಡ್ವಾಣಿಯವರ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಮರಾಠಿಗರು ಬಿಜೆಪಿಗೆ ಬೆಂಬಲ ನೀಡಿದ್ದರು