Home / ಜಿಲ್ಲೆ / ಬೆಳಗಾವಿ / ಬಿಜೆಪಿ ನಿದ್ದೆ ಕೆಡಿಸಿದ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ

ಬಿಜೆಪಿ ನಿದ್ದೆ ಕೆಡಿಸಿದ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ

Spread the love

ಬೆಳಗಾವಿ: ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಬೆಳಗಾವಿ ಗಡಿ ಪ್ರದೇಶದಲ್ಲಿರುವ 7 ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಸಂಖ್ಯಾತ ಮರಾಠಿ ಮತದಾರರ ಮೇಲೆ ಹಿಡಿತ ಸಾಧಿಸಿ ಯಶಸ್ವಿಯಾಗಿದ್ದ ಬಿಜೆಪಿಗೆ ಇದೀಗ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ ಚಿಂತೆಗೀಡಾಗುವಂತೆ ಮಾಡಿದೆ.

 

2023ರ ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ಅಥಣಿ, ನಿಪಾಣಿ, ಕಾಗವಾಡ, ಖಾನಾಪುರ, ಬೆಳಗಾವಿ ಗ್ರಾಮಾಂತರ, ಬೆಳಗಾವಿ ದಕ್ಷಿಣ ಮತ್ತು ಬೆಳಗಾವಿ ಉತ್ತರ — ಅಂತರರಾಜ್ಯ ಗಡಿ ಭಾಗದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಮರಾಠಿ ಮತಗಳ ಮೇಲೆ ಕಣ್ಣಿಟ್ಟಿರುವ ಶರದ್ ಪವಾರ್ ಅವರ, ಎಂಇಎಸ್‌ಗೆ ಬೆಂಬಲ ನೀಡುವ ನಿರೀಕ್ಷೆಯಿದೆ. ಈ ಹಿನ್ನಲೆಯಲ್ಲಿ ಶರದ್ ಪವಾರ್ ಹಾಗೂ ಎಂಇಎಸ್ ನಾಯಕರು ಭೇಟಿ ಮಾಡಿರುವುದು ಬಿಜೆಪಿ ಚಿಂತೆಗೆ ಕಾರಣವಾಗಿದೆ.

ಎಲ್’ಕೆ ಅಡ್ವಾಣಿಯವರ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಮರಾಠಿಗರು ಬಿಜೆಪಿಗೆ ಬೆಂಬಲ ನೀಡಿದ್ದರು


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ