Breaking News

ಹತ್ತಾರು ಜನರ ಎದುರೇ ವಕೀಲೆ ಮೇಲೆ ಹಲ್ಲೆ; ಆರೋಪಿಯ ಬಂಧನ..

Spread the love

ಬಾಗಲಕೋಟೆ: ರಸ್ತೆ ಬದಿಯಲ್ಲಿ ಹತ್ತಾರು ಜನರ ಎದುರೇ ವಕೀಲೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಗಂಭೀರವಾಗಿ ಹಲ್ಲೆ ನಡೆಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಮಾತ್ರವಲ್ಲ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಗೀತಾ ಸಿಕ್ಕೇರಿ ಎಂಬಾಕೆ ಹಲ್ಲೆಗೊಳಗಾದ ವಕೀಲೆ.

ಮಹಾಂತೇಶ್ ಚೊಳಚಗುಡ್ಡ ಎಂಬಾತ ಬಂಧನಕ್ಕೆ ಒಳಗಾಗಿರುವ ಆರೋಪಿ. ಬಾಗಲಕೋಟೆಯಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿತ್ತು. ಸಂಜೆಯೊಳಗಾಗಿ ಬಾಗಲಕೋಟೆ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ರಸ್ತೆ ಬದಿಯಲ್ಲಿ ಸಾರ್ವಜನಿಕರ ಎದುರೇ ಸಂಗೀತಾ ಮೇಲೆ ಮಹಾಂತೇಶ್ ಹಲ್ಲೆ ನಡೆಸಿದ್ದು, ಒದೆ ಕೂಡ ಕೊಟ್ಟಿದ್ದಾನೆ. ಈ ಸಂದರ್ಭದಲ್ಲಿ ಆಕೆಯ ಜತೆಗಿದ್ದ ಪತಿಗೂ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಇಬ್ಬರನ್ನೂ ಬಳಿಕ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆಯ ಕಾರ್ಯಕ್ಕೆ ಒಲಿದು ಬಂತು ರಾಷ್ಟ್ರಮಟ್ಟದ ಪ್ರಶಸ್ತಿ

Spread the love ಬಾಗಲಕೋಟೆ: ಮಹಿಳೆಯರು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಮಹಿಳಾ ಸಂಘಟನೆಯೊಂದು ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ