ಗಂಡನ ಜೊತೆ ಜಗಳ – ಸಾಯ್ತೀನಿ ಅಂತ ಕೆರೆಯಲ್ಲಿ ಕೂತ ಮಹಿಳೆ

Spread the love

ಬೆಂಗಳೂರು: ಸಾಮಾನ್ಯವಾಗಿ ಗಂಡ, ಹೆಂಡತಿ ಜಗಳ ಉಂಡು ಮಲಗುವರೆಗೂ ಅಂತ ಗಾದೆ ಮಾತಿದೆ. ಅದೆಷ್ಟೋ ದಂಪತಿಗಳು ಜಗಳವಾಡಿ ಸ್ವಲ್ಪ ಹೊತ್ತಿನಲ್ಲೇ ಸರಿಹೋಗಿ ಅನ್ಯೋನ್ಯವಾಗಿರುತ್ತಾರೆ. ಆದರೆ ಮಹಿಳೆಯೊಬ್ಬರು ಗಂಡನ ಜೊತೆಗೆ ಜಗಳವಾಡಿ ಸಾಯುತ್ತೇನೆ ಅಂತ ಕೆರೆಯಲ್ಲಿ ಕೂತ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೋರಮಂಗಲ 3ನೇ ಬ್ಲಾಕ್‍ನಲ್ಲಿ ಈ ಘಟನೆ ನಡೆದಿದ್ದು, ವಾಕಿಂಗ್ ಹೋಗುವ ವೇಳೆ ಗಂಡನೊಂದಿಗೆ ಮಹಿಳೆ ಜಗಳವಾಡಿದ್ದಾರೆ. ನಂತರ ಕೋಪ ಮಾಡಿಕೊಂಡು ಮಹಿಳೆ ನಾನು ಸಾಯುತ್ತೇನೆ ಎಂದು ಕೋರಮಂಗಲ ಮೂರನೇ ಬ್ಲಾಕ್ ನಲ್ಲಿರುವ ಕೆರೆಯೊಳಗೆ ಕುಳಿತುಕೊಂಡಿದ್ದಾರೆ. 

ನಂತರ ಮಹಿಳೆ ಮನವೊಲಿಸಲು ಸಾಕಷ್ಟು ಮಂದಿ ಪ್ರಯತ್ನಿಸಿದ್ದಾರೆ. ಆದರೆ ಮಹಿಳೆ ಯಾರಾದರೂ ಹತ್ತಿರ ಬಂದರೆ ಕೆರೆಯೊಳಗೆ ಮುಳುಗಿ ಬಿಡುತ್ತೇನೆ ಎಂದು ಬೆದರಿಕೆಯೊಡ್ಡಿದ್ದಾರೆ. ಕೊನೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಆಕೆಯ ಮನವೊಲಿಸಿ ಕೆರೆಯಿಂದ ಹೊರಗೆ ಕರೆಸಿದ್ದಾರೆ. 


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ