Breaking News

ಬೊಮ್ಮಾಯಿ, ಕಟೀಲ್‌ಗೆ ತರಾಟೆ – ಅಭಿವೃದ್ಧಿ ಬಗ್ಗೆ ಮಾತಾಡಿ ಎಂದು ಆರ್‌ಎಸ್‌ಎಸ್‌ ಚಾಟಿ

Spread the love

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ಹಾಗೂ ಬಿಜೆಪಿ ನಡವಳಿಕೆ ಬಗ್ಗೆ ಆರ್‌ಎಸ್‌ಎಸ್‌ ಗರಂ ಆಗಿದೆ. ಶನಿವಾರ ರಾತ್ರಿ ಮೂರು ಗಂಟೆಗಳ ಕಾಲ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಬಿಜೆಪಿ ವಿರುದ್ಧ ಆರ್‌ಎಸ್‌ಎಸ್‌ ಕಿಡಿಕಾರಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನೂ ಆರ್‌ಎಸ್‌ಎಸ್‌ ತರಾಟೆಗೆ ತೆಗೆದುಕೊಂಡಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಅವರನ್ನು ಹೊರಗಿಟ್ಟು ‌ಸಭೆ ನಡೆಸಲು ಆರ್‌ಎಸ್‌ಎಸ್‌ ಮುಂದಾಗಿತ್ತು. ಬಿಜೆಪಿ ಹೈಕಮಾಂಡ್ ನಾಯಕರೊಬ್ಬರ ಮನವಿ ಬಳಿಕ‌ ಸಭೆಯಲ್ಲಿ ಪಾಲ್ಗೊಳ್ಳಲು ಒಪ್ಪಿಕೊಂಡಿತು.

ಸಭೆ‌ ಆರಂಭವಾಗುತ್ತಿದ್ದಂತೆ ಆರ್‌ಎಸ್‌ಎಸ್‌ ಮುಖಂಡರೊಬ್ಬರು ಗರಂ ಆದರು. ನಾವು ನಿಮ್ಮನ್ನು ಬಿಟ್ಟು ಸಭೆ ಮಾಡಬೇಕೆಂದು ತೀರ್ಮಾನ ಮಾಡಿದ್ದೆವು. ಆದರೆ ಜನತೆಗೆ ತಪ್ಪು ಸಂದೇಶ ಹೋಗುತ್ತೆ ಅಂತಾ ರಾಷ್ಟ್ರೀಯ ನಾಯಕರೊಬ್ಬರು‌ ಮನವಿ ಮಾಡಿಕೊಂಡರು. ಅದಕ್ಕಾಗಿ ನಿಮ್ಮ ನಾಲ್ವರನ್ನು ಸಭೆಗೆ ಆಹ್ವಾನಿಸಿದ್ದು ಎಂದು ಆರಂಭದಲ್ಲೇ ತರಾಟೆಗೆ ತೆಗೆದುಕೊಂಡರು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ