Breaking News

ಬಿಬಿಎಂಪಿಯ ಡೆಡ್ಲಿ ಕಸದ ಲಾರಿಗಳಿಗೆ ಶೀಘ್ರವೇ ಸ್ಪೀಡ್ ಗವರ್ನರ್ ಅಳವಡಿಕೆ

Spread the love

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗಳಿಂದ ಅಪಘಾತ ಹಿನ್ನಲೆ ಸ್ಪೀಡ್ ಗವರ್ನರ್ ಅಳವಡಿಕೆಗೆ ಸೂಚನೆ ನೀಡಲಾಗಿದೆ ಎಂದು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೆಗೌಡ ಹೇಳಿದ್ದಾರೆ.

ಲಾರಿಗಳು 40 ಕಿಮೀ.ಗಿಂತ ವೇಗವಾಗಿ ಚಲಿಸದಂತೆ ವ್ಯವಸ್ಥೆಗೊಳಿಸಬೇಕು. ಸ್ಪೀಡ್ ಗವರ್ನರ್ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಆಲ್ಕೋ ಮೀಟರ್ ಮೂಲಕ ಚಾಲಕರ ತಪಾಸಣೆಗೆ ಸೂಚಿಸಲಾಗಿದೆ. ಈಗಾಗಲೇ ಬಿಬಿಎಂಪಿ ಕೆಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ ಎಂದಿದ್ದಾರೆ. 

ಈಗಾಗಲೇ ಸುಮಾರು ಚಾಲಕರಿಗೆ ಟ್ರಾಫಿಕ್ ಪೊಲೀಸರು ಹಂತ ಹಂತವಾಗಿ ತರಬೇತಿ ನೀಡುತ್ತಿದ್ದಾರೆ. ಪ್ರತಿ ಬಾರಿ 40 ಜನರಿಗೆ ತರಬೇತಿ ಕೊಟ್ಟು, ಒಂದು ರೀತಿ ಸಕಾರಾತ್ಮಕ ಬೆಳವಣಿಗೆ ಚಾಲಕರಲ್ಲಿ ಕಾಣಿಸುತ್ತಿದೆ. ಅಲ್ಲದೇ ಕಸದ ಲಾರಿಗಳ ಮೇಲೆ ಸಂಚಾರಿ ಪೊಲೀಸರು ಸ್ಪೆಷಲ್ ಡ್ರೈವ್ ಮಾಡಿದ್ದಾರೆ. ಈ ವೇಳೆ ಓರ್ವ ಚಾಲಕ ಮಾತ್ರ ಮದ್ಯಪಾನ ಮಾಡಿದ್ದು ಕಂಡು ಬಂದಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ