Breaking News

ಮಳೆ ಬಂದಾಗ ಈ ಸಮಸ್ಯೆ ಆಗಿದೆ. ಈ ಸಮಸ್ಯೆ ಬಗೆಹರಿಸದಿದ್ರೇ ಮತ್ತೆ ನಾನು ಚುನಾವಣೆಗೆ ನಿಲ್ಲಲ್ಲ.

Spread the love

ಬೆಂಗಳೂರು: ವಾರ್ಡ್ ನಂ.160 ರಾಜರಾಜೇಶ್ವರಿ ನಗರದಲ್ಲಿ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಬೆಂಗಳೂರು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ನಡುವೆ ರಾಜಕಾಲುವೆಗಳ ಒತ್ತುವರಿ ಮಾಡಿಕೊಂಡಿರುವುದರಿಂದಾಗಿ ಮಳೆ ಬಂದಾಗ ಈ ಸಮಸ್ಯೆ ಆಗಿದೆ. ಈ ಸಮಸ್ಯೆ ಬಗೆಹರಿಸದಿದ್ರೇ ಮತ್ತೆ ನಾನು ಚುನಾವಣೆಗೆ ನಿಲ್ಲಲ್ಲ. ನಾನು ನನ್ನ ಮತದಾರರಿಗೆ ಭರವಸೆ ಕೊಡ್ತೀನಿ ಎಂದು ಸಚಿವ ಮುನಿರತ್ನ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮಳೆ ಜಾಸ್ತಿಯಾದಾಗ ತಗ್ಗು ಪ್ರದೇಶಗಳಿಗೆ ನೀರು ಬರುತ್ತೆ. ಭೌಗೋಳಿಕವಾಗಿ ಜಾಗ ಕೂಡ ಹಾಗೇ ಇದೆ. 1,015 ಮನೆಗಳಿಗೆ ನೀರು ನುಗ್ಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ. ರಾಜಕಾಲುವೆ ನೀರನ್ನು ಹೊರಗಡೆಗೆ ತಿರುಗಿಸಬೇಕು ಅದೇ ಈ ಸಮಸ್ಯೆಗೆ ಪರಿಹಾರ. ಕೆಲವೊಂದು ಕಡೆ ರಾಜಕಾಲುವೆ ನೀರು ಒಂದೇ ಕಡೆ ನಿಲ್ಲುತ್ತದೆ. ರಾಜಕಾಲುವೆ ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡಿರೋರನ್ನು ಪಟ್ಟಿ ಮಾಡಲಾಗಿದೆ. ಈಗಾಗಲೇ ಸಾಕಷ್ಟು ತೆರವು ಮಾಡಿದ್ದೇವೆ. ಮಿಕ್ಕಿದನ್ನು ಕೂಡಲೇ ತೆರವು ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಗುರುವಾರ ಮಹತ್ವದ ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಸಭೆ – ಸಿಎಂ ದೆಹಲಿಗೆ


Spread the love

About Laxminews 24x7

Check Also

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Spread the loveಬೆಂಗಳೂರು: ಡಿ.ಕೆ.ಶಿವಕುಮಾರ್  ಕೆಪಿಸಿಸಿ ಅಧ್ಯಕ್ಷರಾಗಿ ಇಂದಿಗೆ 6 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಪಕ್ಷದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ