Breaking News

ಚಿಂಚಲಿ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಎಸಿಬಿ ಬಲೆಗೆ

Spread the love

ಸಾರ್ವಜನಿಕ ಬಳಿ ಲಂಚಕ್ಕೆ ಬೇಡಿಕೆಇಟ್ಟು ಹಣ ಪೀಕುತ್ತಿದ್ದ ಲಂಚಬಾಕ ಗ್ರಾಮಲೆಕ್ಕಾಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ನಡೆದಿದೆ.ಹೌದು ರಾಯಬಾಗ್ ತಾಲೂಕಿನ ಚಿಂಚಲಿ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಜಗದೀಶ್ ಕಿತ್ತೂರ ಎಂಬವ ಸಾರ್ವಜನಿಕವಾಗಿ ಕೆಲಸಮಾಡುತ್ತಿದ್ದ ವೇಳೆ ಜನರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾನೆ. ದಿನಾಂಕ: 18.05.2022 ರಂದು ಗ್ರಾಮ ಲೆಕ್ಕಾಧಿಕಾರಿ ಲಂಚ ಕೇಳುತ್ತಿದ್ದಾರೆ ಎಂದು ಗಣಕೋಡಿಯ ಸಚೀನ್ ಶಾಂತಿನಾಥ ಶಿಂಧೆ ಎಸಿಬಿಗೆ ದೂರು ನೀಡಿದ್ದರು.

ವೇಳೆ ಸಚಿನ್ ಶಿಂಧೆ ರವರಿಂದ 5ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಚಿಂಚಲಿ ಗ್ರಾಮಲೆಕ್ಕಾಧಿಕಾರಿ ಜಗದೀಶ್ ಕಿತ್ತೂರ್ ಎಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಲಂಚದ ಹಣವನ್ನು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರೆದಿರುತ್ತದೆ. ಬಿ.ಎಸ್. ನೇಮಗೌಡ, ಪೊಲೀಸ್ ಅಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ, ಉತ್ತರ ವಲಯ, ಬೆಳಗಾವಿ ರವರ ಮಾರ್ಗದರ್ಶನದಲ್ಲಿ ಪಿರ್ಯಾದಿಯವರು .ಈ ಬಗ್ಗೆ ನೀಡಿದ ಜೆ.ಎಮ್.ಕರುಣಾಕರ ಶೆಟ್ಟಿ, ಪೊಲೀಸ್ ಉಪಾಧೀಕ್ಷಕರವರು ದೂರನ್ನು ದಾಖಲಿಸಿಕೊಂಡಿದ್ದಾರೆ. ಶಿ ್ರೀ ನಿರಂಜನ್ ಎಂ. ಪಾಟೀಲ್, ಪೊಲೀಸ್ ನಿರೀಕ್ಷಕರು ಇದ್ದರೂ


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ