Breaking News

ಶಾಸಕ ರಾಜೂಗೌಡ ಹೆಸರೇಳಿ ಜನರನ್ನು ವಂಚಿಸಿದ್ದ ನಯವಂಚಕಿ ರೇಖಾ ಎಂಬಾಕೆಯ ಬಂಧನ

Spread the love

ರಾಯಚೂರು: ಶಾಸಕ ರಾಜೂಗೌಡ ಹೆಸರೇಳಿ ಜನರನ್ನು ವಂಚಿಸಿದ್ದ ನಯವಂಚಕಿ ರೇಖಾ ಎಂಬಾಕೆಯ ಬಂಧನವಾಗಿದೆ. ರೇಖಾ ವಂಚನೆಯ ಬಗ್ಗೆ ಇದೇ ಮೇ 10 ರಂದು ದಿಗ್ವಿಜಯ ನ್ಯೂಸ್ ವಿಸ್ತೃತ ವರದಿ ಬಿತ್ತರಿಸಿತ್ತು. ಇದರ ಪರಿಣಾಮವಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

 

ಎನ್​​ಜಿಓ ಮೂಲಕ ಬ್ಯಾಂಕ್ ಓಪನ್ ಮಾಡಿ ಬ್ಯಾಂಕಿನಲ್ಲಿ ನೌಕರಿ ಕೊಡಿಸುವುದಾಗಿ ಜನರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ರೇಖಾ ಮೋಸ ಮಾಡಿದ್ದಾಳೆ. ತನ್ನ ಕೃತ್ಯಕ್ಕೆ ಶಾಸಕ ರಾಜೂಗೌಡ ಹೆಸರನ್ನು ಬಳಸಿಕೊಂಡಿದ್ದಳು. ಈ ಬಗ್ಗೆ ದಿಗ್ವಿಜಯ ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜೂಗೌಡ, ಸುರಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದೀಗ ಸಕಲೇಶಪುರ ಮೂಲದ ರೇಖಾಳನ್ನು ಬಂಧಿಸಿ ಸುರಪುರ ಪೊಲೀಸರು ಕರೆತಂದಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂನಲ್ಲಿ ರೇಖಾ ವಾಸವಿದ್ದಳು. ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದಳು. ರೇಖಾಗೆ ಈರಪ್ಪಗೌಡ ಎಂಬುವವನು ಮಧ್ಯವರ್ತಿಯಾಗಿದ್ದ. ಈತ ಕೆ.ಆರ್.ಪುರಂನಲ್ಲಿ ಬೇಕರಿ ಇಟ್ಟುಕೊಂಡಿದ್ದ. ಈರಪ್ಪಗೌಡನ ಮೂಲಕ ರೇಖಾ ಹಣ ದೋಚುತ್ತಿದ್ದಳು. ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಜಿಲ್ಲೆಯ ಹಲವರಿಗೆ ಮೋಸ ಮಾಡಿದ್ದಾರೆ.


Spread the love

About Laxminews 24x7

Check Also

ಕೌಟುಂಬಿಕ ಕಲಹಕ್ಕೆ ಗರ್ಭಿಣಿ ಸೊಸೆಯನ್ನ ಕೊಂದ ಮಾವ – ಆರೋಪಿ ಅರೆಸ್ಟ್

Spread the loveರಾಯಚೂರು: ಹಣ ಕೊಡದಿದ್ದಕ್ಕೆ ಮಗನೋರ್ವ ಹೆತ್ತ ತಾಯಿಯನ್ನೇ ಅಟ್ಟಾಡಿಸಿ ಕೊಲೆ ಮಾಡಿದ್ದ ಘಟನೆ ಮಂಗಳವಾರ ನಗರದಲ್ಲಿ ನಡೆದಿತ್ತು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ