Breaking News

ಮಾಜಿ ಸೈನಿಕನ ಕೈ ಕಾಲು ಕಟ್ಟಿ ಗ್ರಾಮಸ್ಥರು ಮನಬಂದಂತೆ ಒದೆ………..

Spread the love

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಲಗುಂಡಿ ಗ್ರಾಮದಲ್ಲಿ ಯುವಕನೊಬ್ಬನಿಗೆ ಚಾಕು ಇರಿದು ಕೊಲೆ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸೈನಿಕನ ಕೈ ಕಾಲು ಕಟ್ಟಿ ಗ್ರಾಮಸ್ಥರು ಮನಬಂದಂತೆ ಒದೆ ಕೊಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಾಜಿ ಸೈನಿಕನಿಗೆ ಕೊಲೆಯಾದ ಯವಕನ ಸಂಬಂಧಿಕರು ಹಾಗೂ ಗ್ರಾಮಸ್ಥರು ಧರ್ಮದೇಟು ನೀಡಿದ್ದಾರೆ. ಮಾಜಿ ಸೈನಿಕ ಗಂಗಾಧರ ನಿಂಗಪ್ಪ ನೂಲ್ವಿ ತಿಪ್ಪೆಗೆ ಕಸ ಹಾಕುವ ವಿಷಯಕ್ಕೆ ಸಂಬಂಧಿಸಿದಂತೆ ಶಾರದಾ ಪಾಟೀಲ್ ಎನ್ನುವ ಮಹಿಳೆಯ ಪ್ರಚೋದನೆಯಿಂದ ಜಗದೀಶ್ ತಾಂಬೆಯನ್ನು ಚಾಕು ಇರಿದು ಕೊಲೆ ಮಾಡಿದ್ದ.

ಚಾಕು ಇರಿತದಿಂದ ಯುವಕ ತೀವ್ರ ರಕ್ತಸಾವ್ರವಾಗಿ ಮೃತಪಟ್ಟಿದ್ದ. ಹೀಗಾಗಿ ರೊಚ್ಚಿಗೆದ್ದ ಗ್ರಾಮಸ್ಥರು ಸೈನಿಕನ ಕೈ ಹಾಗೂ ಕಾಲನ್ನು ಕಟ್ಟಿ ಮನಬಂದಂತೆ ಧರ್ಮದೇಟು ಕೊಟ್ಟಿದ್ದಾರೆ. ಯುವಕನ ಕೊಲೆಗೆ ಸಂಬಂಧಿಸಿದಂತೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ಹಲ್ಲೆಗೆ ಒಳಗಾಗಿರುವ ಸೈನಿಕ ಹಾಗೂ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ