ಸಮಾಜಕ್ಕೆ ಹಾನಿ ಮಾಡುವಂತಹ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟ, ನಟಿಯರು ಹಾಗೂ ಸಿಲೆಬ್ರಿಟಿಗಳ ಬಗ್ಗೆ ಅಲ್ಲಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಕನ್ನಡ ಸಿನಿಮಾ ರಂಗದಲ್ಲಿ ಹಣಕ್ಕಾಗಿ ಆನ್ಲೈನ್ ಆಟಗಳಿಗೆ ರೂಪದರ್ಶಿಯಾಗಿ ಕೆಲಸ ಮಾಡುತ್ತಿದ್ದ ಕಲಾವಿದರ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಈಗಲೂ ಅದು ಮುಂದುವರಿದಿದೆ.
ಹಾಗೆಯೇ ಈ ವಿರೋಧದ ಅಲೆಯು ಬಾಲಿವುಡ್ನಲ್ಲೂ ಮುಂದುವರಿದಿದೆ. ಆನ್ಲೈನ್ ಜೂಜು, ತಂಬಾಕು ಉತ್ಪನ್ನಗಳ ಜಾಹೀರಾತಿನಲ್ಲಿ ಕಾಣಿಸಿಕೊಂಡ ಬಾಲಿವುಡ್ ನಟರ ಮೇಲೆ ಮುಂಬೈನಲ್ಲಿ ದೂರು ಕೊಟ್ಟಿದ್ದು, ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಈ ನಟರ ವಿರುದ್ಧ ಕ್ರಮ ತಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.
ಮುಂಬೈ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಹೋರಾಟಗಾರ ತಮನ್ನಾ ಹಶ್ಮಿ ಎನ್ನುವವರು ದೂರು ನೀಡಿದ್ದು, ತಂಬಾಕು ಉತ್ಪನ್ನಗಳ ಜಾಹೀರಾತಿನಲ್ಲಿ ನಟರು ಭಾಗಿಯಾಗಿ ಯುವ ಜನರನ್ನು ಹಾದಿ ತಪ್ಪಿಸುತ್ತಿದ್ದಾರೆ. ಹಾಗಾಗಿ ಅಮಿತಾಭ್ ಬಚ್ಚನ್, ಅಜಯ್ ದೇವಗನ್, ಶಾರುಖ್ ಖಾನ್, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಸೇರಿದಂತೆ ಹಲವು ಕಲಾವಿದರ ಹೆಸರನ್ನು ದೂರಿನಲ್ಲಿ ಹೆಸರಿಸಿ, ಕ್ರಮ ತಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ