Breaking News
Home / ಹುಬ್ಬಳ್ಳಿ / ಅದೃಷ್ಟದ ಅಂಬಾಸೆಡರ್‌ನಲ್ಲಿ ಬಂದು ನಾಮಪತ್ರ ಸಲ್ಲಿಸಿದ ಬಸವರಾಜ ಹೊರಟ್ಟಿ

ಅದೃಷ್ಟದ ಅಂಬಾಸೆಡರ್‌ನಲ್ಲಿ ಬಂದು ನಾಮಪತ್ರ ಸಲ್ಲಿಸಿದ ಬಸವರಾಜ ಹೊರಟ್ಟಿ

Spread the love

ಧಾರವಾಡ: ಕರ್ನಾಟಕ ವಿಧಾನಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಬಸವರಾಜ ಹೊರಟ್ಟಿ ಅವರು ತಮ್ಮ ಅದೃಷ್ಟದ ಅಂಬಾಸೆಡರ್ ಕಾರಿನಲ್ಲಿ ಬಂದು ಮಂಗಳವಾರ ನಾಮಪತ್ರ ಸಲ್ಲಿಸಿದರು.

 

1980ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದಾಗಲೂ ತಮ್ಮ ನೆಚ್ಚಿನ ‘ಸಿಎನ್‌ಬಿ 5757’ ನೋಂದಣಿ ಸಂಖ್ಯೆಯ ಅಂಬಾಸೆಡರ್‌ ಕಾರಿನಲ್ಲೇ ಬಂದು ನಾಮಪತ್ರ ಸಲ್ಲಿಸಿದ್ದರು. ಮಂಗಳವಾರವೂ ತಮ್ಮ ಹೇಮಲತಾ ಅವರೊಂದಿಗೆ ಅದೇ ಕಾರಿನಲ್ಲಿ ಬಂದ ಹೊರಟ್ಟಿ ಸಹಾಯಕ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು.

ಹೊರಟ್ಟಿ ಅವರೊಂದಿಗೆ ಅವರ ಬೆಂಬಲಿಗರು ಸಾಕಷ್ಟು ಸಂಖ್ಯೆಯಲ್ಲಿ ಇದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಮಂಗಳವಾರ 2 ಪ್ರತಿ ನಾಮಪತ್ರ ಸಲ್ಲಿಸಿದ್ದೇನೆ. ಮೇ 26ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಬಂದು ಮತ್ತೊಂದು ನಾಮಪತ್ರ ಸಲ್ಲಿಸುತ್ತೇನೆ’ ಎಂದರು.

‘ದೇಶದ ಇತಿಹಾಸದಲ್ಲೇ ಶಿಕ್ಷಕರ ಕ್ಷೇತ್ರದಿಂದ ಏಳು ಬಾರಿ ಯಾರೂ ಗೆದ್ದಿಲ್ಲ. 8ನೇ ಬಾರಿ ಆಯ್ಕೆಯಾದಲ್ಲಿ ದಾಖಲೆ ಆಗಲಿದೆ. ಅದಕ್ಕಾಗಿಯೇ ಎಲ್ಲರೂ ನನ್ನತ್ತ ಒಲವು ತೋರಿಸುತ್ತಿದ್ದಾರೆ’ ಎಂದರು.


Spread the love

About Laxminews 24x7

Check Also

ಶ್ರೀ ಶ್ರೀ ಹರಿ ವಿಠಲ ಪಾಂಡುರಂಗ ದೇವರಿಗೆ ತೊಟ್ಟಿಲೋತ್ಸವ ಸೇವೆ !

Spread the loveಹುಬ್ಬಳ್ಳಿ; ನಗರದ ಎಸ್.ಎಸ್. ಕೆ. ಪಂಚ ಟ್ರಸ್ಟ್, ಶ್ರೀ ದುರ್ಗಾದೇವಿ ದೇವಸ್ಥಾನ, ದಾಜಿಬಾನ ಪೇಟ,ಹುಬ್ಬಳ್ಳಿ ಈ ಸಂಸ್ಥೆಯ , …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ