Breaking News
Home / ರಾಜಕೀಯ / ಮನೆ, ಕಟ್ಟಡ ನಿರ್ಮಿಸುವವರಿಗೆ ಇಲ್ಲಿದೆ ಸಿಹಿ ಸುದ್ದಿ

ಮನೆ, ಕಟ್ಟಡ ನಿರ್ಮಿಸುವವರಿಗೆ ಇಲ್ಲಿದೆ ಸಿಹಿ ಸುದ್ದಿ

Spread the love

ಮನೆ ನಿರ್ಮಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ನಿರಂತರ ಬೆಲೆ ಏರಿಕೆಯಿಂದ ಮಾರುಕಟ್ಟೆಯಲ್ಲಿ ಹಣದುಬ್ಬರ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಕಬ್ಬಿಣ, ಪ್ಲಾಸ್ಟಿಕ್, ಉಕ್ಕು ವಸ್ತುಗಳ ಮೇಲೆ ಆಮದು ಸುಂಕವನ್ನು ಮನ್ನಾ ಮಾಡಿ, ರಫ್ತು ಸುಂಕ ಹೆಚ್ಚಿಸಿದೆ.

 

ಇದರ ಬೆನ್ನಲ್ಲೇ ಕೆಲವು ರಾಜ್ಯ ಸರ್ಕಾರಗಳು ವ್ಯಾಟ್ ಕಡಿಮೆ ಮಾಡಿದ್ದು, ಇಂಧನ ದರ ಇಳಿಕೆಯಾಗಿದೆ. ಇದರೊಂದಿಗೆ ಕಚ್ಚಾ ವಸ್ತುಗಳ ದರವೂ ಕೂಡ ಸಹಜವಾಗಿ ಇಳಿಕೆಯಾಗುತ್ತಿದೆ.

ಮನೆ ನಿರ್ಮಿಸುವ ಕಟ್ಟಡ ಸಾಮಗ್ರಿಗಳಾದ ಸಿಮೆಂಟ್ ಮತ್ತು ಕಬ್ಬಿಣ ದರದಲ್ಲಿ ಅಲ್ಪ ಇಳಿಕೆಯಾಗಿದ್ದು, ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಿಮೆಂಟ್ ದರ ಪ್ರತಿ ಚೀಲಕ್ಕೆ 5- 8 ರೂಪಾಯಿಯಷ್ಟು ಕಡಿಮೆಯಾಗಿದೆ. ಕಬ್ಬಿಣ ಕೆಜಿಗೆ 4 -6 ರೂಪಾಯಿವರೆಗೂ ಕಡಿಮೆಯಾಗಲಿದೆ. ಕೇಂದ್ರ ಸರ್ಕಾರ ಕಬ್ಬಿಣದ ಮೇಲೆ ಹೆಚ್ಚಿನ ರಫ್ತು ಸುಂಕ ವಿಧಿಸಿದ್ದರಿಂದ ಉಕ್ಕಿನ ಬೆಲೆ ಶೇ. 10 ರಿಂದ 15 ರಷ್ಟು ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ