Breaking News
Home / ರಾಜಕೀಯ / ಬೆಂಗಳೂರಲ್ಲಿ ಸ್ಕೂಲ್​ ಬಸ್​ ಅಪಘಾತ: ಕಾಲೇಜಿಗೆ ಸೇರಲು ಹೊರಟ್ಟಿದ್ದ ಬಾಲಕಿ ಸ್ಥಳದಲ್ಲೇ ಸಾವು

ಬೆಂಗಳೂರಲ್ಲಿ ಸ್ಕೂಲ್​ ಬಸ್​ ಅಪಘಾತ: ಕಾಲೇಜಿಗೆ ಸೇರಲು ಹೊರಟ್ಟಿದ್ದ ಬಾಲಕಿ ಸ್ಥಳದಲ್ಲೇ ಸಾವು

Spread the love

ಬೆಂಗಳೂರು: ಖಾಸಗಿ ಸ್ಕೂಲ್​ ಬಸ್​ ಮತ್ತು ಬೈಕ್​ ನಡುವೆ ನಗರದ ಬನಶಂಕರಿಯಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, 16 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಹಾರೋಹಳ್ಳಿಯ ಕೀರ್ತನ ಮೃತ ದುರ್ದೈವಿ. ಇತ್ತೀಚಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸ್​ ಆಗಿದ್ದ ಕೀರ್ತನ ಮತ್ತು ಹರ್ಷಿತಾ ಇಬ್ಬರೂ ಕನಕಪುರ ರಸ್ತೆಯ ನೆಟ್ಟಿಗೆರೆ ಬಳಿಯ ಅಕ್ಕನ ಮನೆಗೆ ಬುಧವಾರ ತೆರಳಿದ್ದರು.

ಗುರುವಾರ ಬೆಳಗ್ಗೆ ನಾಗರಬಾವಿಯ ಸರ್ಕಾರಿ ಕಾಲೇಜಿಗೆ ಸೇರಲೆಂದು ಸ್ನೇಹಿತ ದರ್ಶನ್​ನ ಬೈಕ್​ನಲ್ಲಿ ತ್ರಿಬಲ್​ ರೈಡಿಂಗ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಬನಶಂಕರಿಯ ಕಿತ್ತೂರು ರಾಣಿ ಚೆನ್ನಮ್ಮ ಫ್ಲೈ ಓವರ್ ಬಳಿ ವೇಗವಾಗಿ ಬಂದ ಡೆಲ್ಲಿ ಪಬ್ಲಿಕ್ ಶಾಲೆಯ ವ್ಯಾನ್ ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಕೀರ್ತನಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ