Breaking News

ಕಾಂಗ್ರೆಸ್‌ನಿಂದ ಎಷ್ಟು ಮಂದಿ ಬರ್ತಾರೆ ಕಾದು ನೋಡಿ: ಕಟೀಲ್

Spread the love

ಬೆಳಗಾವಿ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಬಿಟ್ಟು ಬಹಳಷ್ಟು ಮಂದಿ ನಮ್ಮೊಂದಿಗೆ ಬರಲಿದ್ದಾರೆ. ಎಷ್ಟು ಜನ ಬರುತ್ತಾರೆ ಎನ್ನುವುದನ್ನು ಕಾದು ನೋಡಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಹೇಳಿದರು.

 

‘ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯವರಿಗೆ ಅಭ್ಯರ್ಥಿ ಇರಲಿಲ್ಲ’ ಎಂಬ ಶಿವಕುಮಾರ್‌ ಹೇಳಿಕೆಗೆ ಮೇಲಿನಂತೆ ಇಲ್ಲಿ ಗುರುವಾರ ಪ್ರತಿಕ್ರಿಯಿಸಿದರು.

ಪಠ್ಯಕ್ರಮ ಪರಿಷ್ಕರಣೆ ವಿರೋಧಿಸಿ ಹೋರಾಟ ನಡೆಸುವುದಾಗಿ ಕಾಂಗ್ರೆಸ್‌ ಮುಖಂಡರು ಎಚ್ಚರಿಕೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಆ ಪಕ್ಷದವರು ಇನ್ನೊಂದು ವರ್ಷ ಹೋರಾಟದ ಮಾರ್ಗದಲ್ಲೇ ಇರುವುದು ಒಳ್ಳೆಯದು. ಪರಿಷ್ಕರಣೆಯಾಗಿ, ಪಠ್ಯದಲ್ಲಿ ಸರಿಯಾದ ವಿಚಾರಗಳು ಬಂದಾಗ ಚರ್ಚೆಗಳು ಸಹಜ’ ಎಂದು ಸಮರ್ಥಿಸಿಕೊಂಡರು.

 


Spread the love

About Laxminews 24x7

Check Also

ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ

Spread the love ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ