Breaking News

ಮೊಮ್ಮಗಳಿಗೆ ಲೈಂಗಿಕ ಕಿರುಕುಳ; ಸೊಸೆ ಆರೋಪ- ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ

Spread the love

ನವದೆಹಲಿ: ತಮ್ಮ ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಉತ್ತರಾಖಂಡ್ ನ ಮಾಜಿ ಸಚಿವ ರಾಜೇಂದ್ರ ಬಹುಗುಣ ವಿರುದ್ಧ ಸೊಸೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಮೂರು ದಿನಗಳ ನಂತರ ಬಹುಗುಣ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ (ಮೇ 27) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಹುಗುಣ(59ವರ್ಷ) ಅವರು ತಮ್ಮ ಹಲ್ ಡ್ವಾನಿ ಪೊಲೀಸ್ ಠಾಣೆಯ ತುರ್ತು (112) ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ನಂತರ ಪೊಲೀಸರು ಮತ್ತು ನೆರೆಹೊರೆಯವರ ಸಮ್ಮುಖದಲ್ಲಿಯೇ ತನಗೆ ತಾನೇ ಗುಂಡು ಹೊಡೆದುಕೊಂಡು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.

ಸೊಸೆಯ ಆರೋಪದಿಂದ ಬಹುಗುಣ ಅವರು ತುಂಬಾ ಆಘಾತಕ್ಕೊಳಗಾಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿ ಪಂಕಜ್ ಭಟ್ ಎನ್ ಡಿಟಿವಿಗೆ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಗುಂಡು ಹೊಡೆದುಕೊಳ್ಳದಂತೆ ಧ್ವನಿವರ್ಧಕದ ಮೂಲಕ ವಿನಂತಿಸಿಕೊಂಡಿದ್ದರು. ಆದರೆ ಟ್ಯಾಂಕ್ ಮೇಲೆ ನಿಂತಿದ್ದ ಬಹುಗುಣ ತಮ್ಮ ಎದೆಗೆ ಗುಂಡು ಹೊಡೆದುಕೊಂಡು ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಸೊಸೆ ನೀಡಿರುವ ದೂರಿನ ಆಧಾರದ ಮೇಲೆ ಬಹುಗುಣ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಕ್ರಮ ಸಂಬಂಧದ ವಿಚಾರದಲ್ಲಿ ಸೊಸೆ ಮತ್ತು ಪುತ್ರ ಅಜಯ್ ಬಹುಗುಣ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂದು ವರದಿ ತಿಳಿಸಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ