Breaking News

ಕನ್ನಡಿಗರನ್ನು ಕೆಣಕಿದರೆ ಸರ್ಕಾರ ಸಹಿಸಲ್ಲ; MES ಪುಂಡರಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ

Spread the love

ಬೆಂಗಳೂರು: ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕನ್ನಡಿಗರನ್ನು ಕೆಣಕಿದರೆ ರಾಜ್ಯ ಸರ್ಕಾರ ಸಹಿಸಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಿನ್ನೆ ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡಾಟವನ್ನು ತೀವ್ರವಾಗಿ ಖಂಡಿಸುತ್ತೇವೆ. ಕನ್ನಡ ಹಾಡು ಹಾಕಿದ್ದಾರೆ ಎಂಬ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಕಾನೂನು ಕೈಗೆ ತೆಗೆದುಕೊಂಡರೆ ಸಹಿಸಲು ಸಾಧ್ಯವಿಲ್ಲ ಎಂದರು.

ಇದೇ ವೇಳೆ ಆರ್ ಎಸ್ ಎಸ್ ನ ಮೂಲ ಭಾರತವಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಮೊದಲು ಸಿದ್ದರಾಮಯ್ಯ ದ್ರಾವಿಡರೋ ಅಥವಾ ಯಾರು ಎಂದು ಸ್ಪಷ್ಟಪಡಿಸಲಿ ಎಂದು ಹೇಳಿದರು.


Spread the love

About Laxminews 24x7

Check Also

ಕಾರವಾರ ಕರಾವಳಿ ಉತ್ಸವದಲ್ಲಿ ಮಾನವೀಯತೆ ಮೆರುಗು: ಗಣ್ಯರಿಗಲ್ಲ, ವಿಶೇಷಚೇತನ ಮಕ್ಕಳಿಗೆ ಸಿಕ್ಕಿತು ‘ಹಾರುವ’ ಭಾಗ್ಯ!

Spread the loveಕಾರವಾರ: ಏಳು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಅರಬ್ಬಿ ಸಮುದ್ರತೀರದಲ್ಲಿ ನಡೆಯುತ್ತಿರುವ ‘ಕರಾವಳಿ ಉತ್ಸವ’ವು ಈ ಬಾರಿ ಕೇವಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ