Breaking News
Home / ರಾಜಕೀಯ / ಯತ್ನಾಳ್‍ರಂತೆ ನನಗೂ ಸಚಿವರನ್ನಾಗಿ ಮಾಡ್ತೀವಿ ಎಂದು ಹಣ ಕೇಳಿದ್ರು:ರೇಣುಕಾಚಾರ್ಯ ಹೊಸ ಬಾಂಬ್

ಯತ್ನಾಳ್‍ರಂತೆ ನನಗೂ ಸಚಿವರನ್ನಾಗಿ ಮಾಡ್ತೀವಿ ಎಂದು ಹಣ ಕೇಳಿದ್ರು:ರೇಣುಕಾಚಾರ್ಯ ಹೊಸ ಬಾಂಬ್

Spread the love

ದಾವಣಗೆರೆ: ಬಸನಗೌಡ ಯತ್ನಾಳ್‍ರಂತೆ ನನಗೂ ಸಚಿವರನ್ನಾಗಿ ಮಾಡ್ತೀವಿ ಎಂದು ಬ್ರೋಕರ್‌ಗಳು ಹಣ ಕೇಳಿದ್ರು ಎಂದು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ನನಗೂ ಕೂಡ ಹಲವು ಬ್ರೋಕರ್ಸ್‍ಗಳು ಬಂದು ಹಣ ನೀಡಿ ನಿಮ್ಮನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಹೇಳಿದ್ದರು. ನನಗೆ ಅವರು ಗೊತ್ತು ಇವರು ಗೊತ್ತು ಎಂದು ಹೇಳಿಕೊಂಡಿದ್ದರು. ಆದರೆ ಬಿಜೆಪಿಯಲ್ಲಿ ಸಚಿವ ಸ್ಥಾನ ಮಾರಟಕ್ಕೆ ಇಲ್ಲ ಎಂದು ಹೇಳಿ ಛೀಮಾರಿ ಹಾಕಿ ಕಳುಹಿಸಿದ್ದೆ ಕಾಂಗ್ರೆಸ್‍ನಲ್ಲಿ ಹಣ ಕೊಟ್ಟು ಬಿ ಪಾರ್ಮ್, ಸಚಿವ ಸ್ಥಾನ ಖರೀದಿ ಮಾಡುತ್ತಾರೆ. ನಮ್ಮ ಬಿಜೆಪಿ ಪಕ್ಷದಲ್ಲಿ ಯಾವುದೇ ಅವಕಾಶ ಇಲ್ಲ ಎಂದರು.

ಸಾಮಾನ್ಯ ಕಾರ್ಯಕರ್ತರನ್ನು ಬಿಜೆಪಿ ಪಕ್ಷ ಬೆಳೆಸುತ್ತದೆ, ಮಧ್ಯವರ್ತಿಗಳು ಬಂದು ಕೇಳಿದ್ದಾರೆ. ಅವರನ್ನು ಒದ್ದು ಜೈಲಿಗೆ ಹಾಕಿಸುತ್ತೇನೆ ಎಂದು ಹೇಳಿ ಕಳುಹಿಸಿದ್ದೆ. ಜೈಲಿಗೆ ಹೋದ ಯುವರಾಜ್ ಸ್ವಾಮಿ ನನ್ನ ಧರ್ಮಪತ್ನಿಗೆ ಕಾಲ್ ಮಾಡಿ ನಿಮ್ಮ ಮನೆಯವರಿಗೆ ಸಚಿವ ಸ್ಥಾನ ಎಂದು ಹೇಳಿದ್ದ. ಮೋದಿ, ಅಮಿತ್ ಶಾ ಜೊತೆ ಪೋಟೋ ಹೊಡೆಸಿಕೊಳ್ಳುವುದು ನನಗೆ ಎಲ್ಲರೂ ಗೊತ್ತು ಎಂದು ಹೇಳಿಕೊಳ್ಳುತ್ತಾರೆ. ಬಿಜೆಪಿ ಅಲ್ಲದವರು ಈ ರೀತಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ