ಬೆಂಗಳೂರು : ನೈಋತ್ಯ ಮಾನ್ಸೂನ್ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ (Karnataka) ಹತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ( Yellow Alert ) ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕರ್ನಾಟಕದಲ್ಲಿ ಶೀಘ್ರದಲ್ಲೇ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರುಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ಮೂರು ದಿನಗಳ ಕಾಲ ರಾಜ್ಯದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಲಘು ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 2-3 ದಿನಗಳಲ್ಲಿ ನೈಋತ್ಯ ಮಾನ್ಸೂನ್ ಮಧ್ಯ ಅರಬ್ಬಿ ಸಮುದ್ರದ ಕೆಲವು ಭಾಗಗಳು, ಕರ್ನಾಟಕದ ಕೆಲವು ಭಾಗಗಳು, ಕೊಂಕಣ ಮತ್ತು ಗೋವಾದ ಕೆಲವು ಭಾಗಗಳು, ತಮಿಳುನಾಡಿ ಕೆಲವು ಭಾಗಗಳಲ್ಲಿ ಮಳೆಯಾಗುವ ಕುರಿತು ಮುನ್ಸೂಚನೆಯನ್ನು ನೀಡಿದೆ.