Breaking News

ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕ ವಿರುದ್ಧ ಜಾಮೀನು ರಹಿತ ವಾರೆಂಟ್

Spread the love

ಬೆಂಗಳೂರು: 5 ಬಾರಿ ವಾರೆಂಟ್ ಜಾರಿಗೊಳಿಸ್ದದರೂ ಕೋರ್ಟ್ ಗೆ ಹಾಜರಾಗದಂತ ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕ ( MLA Anil Benake ) ವಿರುದ್ಧ ಜಾಮೀನು ರಹಿತ ವಾರೆಂಟ್ ಅನ್ನು ನ್ಯಾಯಾಲಯವು ಜಾರಿಗೊಳಿಸಿದೆ.

ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಲಯದ ನ್ಯಾಯಮೂರ್ತಿ ಜೆ ಪ್ರೀತ್ ಅವರು, ಶಾಸಕರಾಗಿ 5 ಬಾರಿ ವಾರೆಂಟ್ ಜಾರಿಗೊಳಿಸಿದ್ದರು ಅವರನ್ನು, ಕೋರ್ಟ್ ಗೆ ಹಾಜರುವಡಿಸಲು ಬೆಳಗಾವಿಯ ಮಾರ್ಕೆಟ್ ಠಾಣೆ ಪೊಲೀಸರು ವಿಫಲವಾಗಿದ್ದರು.

ಈ ಹಿನ್ನಲೆಯಲ್ಲಿ ಸಿಟ್ಟಾದಂತ ನ್ಯಾಯಾಮೂರ್ತಿಗಳು, ವಾರೆಂಟ್ ಜಾರಿಗೊಳಿಸಿದ್ದರು, ಶಾಸಕರನ್ನು ಕೋರ್ಟ್ ಗೆ ಹಾಜರುಪಡಿಸಿದಂತ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರಿಗೂ ನೋಟಿಸ್ ಜಾರಿಗೊಳಿಸಿದ್ದಾರೆ. ಅಲ್ಲದೇ ಜೂನ್ 27ರೊಳಗಾಗಿ ಶಾಸಕ ಅನಿಲ್ ಬೆನಕೆ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದ್ದಾರೆ.

ಅಂದಹಾಗೇ 2018ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬೆಳಗಾವಿಯ ಉತ್ತರ ಕ್ಷೇತ್ರದ ಶಾಸಕರಾಗಿರುವಂತ ಅನಿಲ್ ಬೆನಕೆ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದರು. ಈ ಸಂಬಂಧ ಅವರ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿಯೇ ಈಗಾಗಲೇ 5 ಬಾರಿ ವಾರೆಂಟ್ ಜಾರಿಗೊಳಿಸಿದ್ದರು ಕೋರ್ಟ್ ಗೆ ಹಾಜರಾಗಿರಲಿಲ್ಲ. ಇದೀಗ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.


Spread the love

About Laxminews 24x7

Check Also

ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Spread the loveಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ  ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ