Breaking News

ಬೈಲಹೊಂಗಲ ತಾಲೂಕಿನ ಮುರಕಿಭಾವಿ ಗ್ರಾಮದ ಜೈನ ಮಂದಿರವೊಂದರಲ್ಲಿ ಶಿವಲಿಂಗ ಮೂರ್ತಿ ಇರುವುದು ಪತ್ತೆ

Spread the love

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮುರಕಿಭಾವಿ ಗ್ರಾಮದ ಜೈನ ಮಂದಿರವೊಂದರಲ್ಲಿ ಶಿವಲಿಂಗ ಮೂರ್ತಿ ಇರುವುದು ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿದ್ದ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಗ್ರಾಮಸ್ಥರು ಮಾಹಿತಿ ನೀಡಿದ್ದು, ಮುರಕಿಭಾವಿ ಗ್ರಾಮದಲ್ಲಿ ಜೈನ ಸಮುದಾಯದ ಯಾವುದೇ ಕುಟುಂಬಗಳಿಲ್ಲ. ಹಲವು ವರ್ಷಗಳಿಂದ ಜೈನ ಮಂದಿರ ಪಾಳು ಬಿದ್ದಿದೆ. ಹೀಗಾಗಿ ಊರಿನ ಜನರೆಲ್ಲರೂ ಸೇರಿಕೊಂಡು ಶಿವಲಿಂಗ ಮತ್ತು ಬಸವಣ್ಣನವರ ಮೂರ್ತಿ ಸ್ಥಾಪನೆ ಮಾಡಿ ಪೂಜೆ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. 

ಶಿವಲಿಂಗ, ಬಸವಣ್ಣ ಜೊತೆ ಗರ್ಭಗುಡಿಯಲ್ಲಿರುವ ಮಹಾವೀರ ತೀರ್ಥಂಕರ ಮೂರ್ತಿಗೂ ಪೂಜೆ ಸಲ್ಲಿಸಲಾಗುತ್ತಿದೆ ಎಂದು ಮುರಕಿಭಾವಿ ಗ್ರಾಮಸ್ಥರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ