Breaking News

ಆ ಕುಟುಂಬಗಳಿಗೆ ಸಹಾಯ ಹಸ್ತ ಚಾಚಿದ ಭೀಮ ವಾದ

Spread the love

ಖಾನಾಪುರ ತಾಲೂಕಿನ ಚಿಕ್ಕ ಮುನವಳ್ಳಿ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಕ್ಕೆ ದಲಿತ ಕುಟುಂಬಗಳಿಗೆ ನಿಷೇಧಿಸಲಾಗಿತ್ತು. ಇದೀಗ ಈ ದಲಿತ ಕುಟುಂಬಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮ ವಾದ) ಜಿಲ್ಲಾ ಘಟಕದ ವತಿಯಿಂದ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು.

ಹೌದು ಚಿಕ್ಕಮುನವಳ್ಳಿ ಗ್ರಾಮದಲ್ಲಿ ಇತ್ತಿಚಿಗೆ ಗ್ರಾಮದೇವಿಗೆ ಉಡಿ ತುಂಬುವ ಕಾರ್ಯಕ್ರಮವಿತ್ತು. ಈ ವೇಳೆ ದಲಿತರಿಗೆ ದೇವಸ್ಥಾನಗದ ಒಳಗೆ ಪ್ರವೇಶ ಇಲ್ಲ ಎಂದು ಕಮೀಟಿ ಅವರು ಹೇಳಿದ್ದರು. ಈ ವಿಚಾರ ಇಡೀ ರಾಜ್ಯದಲ್ಲಿಯೇ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ಕರ್ನಾಟಕ  ದಲಿತ ಸಂಘರ್ಷ ಸಮಿತಿ ಭೀಮ ವಾದ ಸಂಘಟನೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ಈ ಕುಟುಂಬಗಳಿಗೆ ಒಂದು ತಿಂಗಳಕ್ಕೆ ಆಗುವಷ್ಟು 25 ಕೆಜಿ ಅಕ್ಕಿ, 10 ಕೆಜಿ ಗೋಧಿ ಹಿಟ್ಟು, ಐದು ಕೆಜಿ ಬೇಳೆ 5 ಕೆಜಿ ಸಕ್ಕರೆ, 3 ಎಣ್ಣೆ, ಒಂದು ಕೆಜಿ ಚಹಾಪುಡಿ, 1 ಕೆಜಿ ಕಾರದಪುಡಿಯನ್ನು ವಿತರಿಸಲಾಯಿತು.

ಈ ವೇಳೆ ಮುಖಂಡರಾದ ಬಸವರಾಜ್ ರಾಯವ್ವಗೋಳ, ಸಿದ್ರಾಯಿ ಮೇತ್ರಿ, ರವಿ ಬಸ್ತವಾಡಕರ್, ಸಂಯೋಷ ಕಾಂಬಳೆ, ಶಂಕರ್ ಕಾಂಬಳೆ, ವಿನಾಯಕ್ ಕೋಲಕಾರ್, ಮಹಾಂತೇಶ ಹಾದಿಮನಿ, ಪರಸು ಹಲಸಿ, ಸಂತೋಷ ತಳವಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಕೊಲೆ; ಅರ್ಧ ಗಂಟೆಯಲ್ಲೇ ಆರೋಪಿಗಳ ಬಂಧನ

Spread the loveಹುಬ್ಬಳ್ಳಿ: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ‌. ವಿಠ್ಠಲ ಕರಾಡೆ(29) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ