Breaking News

ಸುವರ್ಣ ವಿಧಾನಸೌಧ ಘನತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕೆಲಸ ಮಾಡಬೇಕು: ನಿತೇಶ್ ಪಾಟೀಲ

Spread the love

ಬೆಳಗಾವಿ: ‘ಇಲ್ಲಿನ ಸುವರ್ಣ ವಿಧಾನಸೌಧ ಘನತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕೆಲಸ ಮಾಡಬೇಕು. ಭದ್ರತೆ, ಸ್ವಚ್ಛತೆ ಸೇರಿ ಸೌಧದ ಸಮರ್ಪಕ ನಿರ್ವಹಣೆಗೆ ಅಗತ್ಯ ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು.

 

ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಕಾರ್ಮಿಕರ ಜೊತೆ ಚರ್ಚಿಸಿದ ನಂತರ ಅವರು ಮಾತನಾಡಿದರು.

‘ಸುವರ್ಣ ವಿಧಾನಸೌಧದ ಮುಂದೆ ಶಾವಿಗೆ ಒಣಗಿಸಲು ಹಾಕಿದ್ದ ಮಹಿಳಾ ಕಾರ್ಮಿಕರೊಬ್ಬರ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ದೈನಂದಿನ ನಿರ್ವಹಣೆ ಕೆಲಸಗಳಿಗೆ ನಿಯೋಜಿಸಲಾಗುವ ಸಿಬ್ಬಂದಿ ಹಾಗೂ ಕಾರ್ಮಿಕರು ಶಿಸ್ತುಬದ್ಧವಾಗಿ ಕೆಲಸ ಮಾಡಬೇಕು’ ಎಂದರು.

ಭದ್ರತೆಗೆ ಸಂಬಂಧಿಸಿದ ಮಾಹಿತಿ ಕಲೆಹಾಕಿದ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ, ‘ಸೌಧಕ್ಕೆ ಬರುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಬೇಕು. ಗುರುತಿನ ಚೀಟಿ ಪರಿಶೀಲಿಸಿ ಪ್ರವೇಶ ಕಲ್ಪಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಯಾವುದೇ ರೀತಿಯ ಕೆಲಸ ‌ಮಾಡುವಾಗ ಸಂಬಂಧಿತ ಇಲಾಖೆ ಅಧಿಕಾರಿಗಳ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಯಾವುದೇ ಬಗೆಯ ಅಚಾತುರ್ಯ ನಡೆದರೆ, ಅವರನ್ನೇ ಹೊಣೆ ಮಾಡಲಾಗುವುದು’ ಎಂದು ಎಚ್ಚರಿಸಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ