Breaking News

ಜೂನ್ 8 ರಿಂದ ಬಿಜೆಪಿಯ ಶಾಸಕರ ಕಚೇರಿ, ಮನೆ ಮುಂದೆ ಧರಣಿ ಸತ್ಯಾಗ್ರಹ: ಪ್ರಮೋದ್ ಮುತಾಲಿಕ್

Spread the love

ಮಸೀದಿ, ದೇವಾಲಯ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್​ಸ್ಪೀಕರ್ ಬಳಕೆ ವಿಚಾರದಲ್ಲಿ ಸರ್ಕಾರಕ್ಕೆ ನೀಡಿದ ಡೆಡ್ ಲೈನ್ ಕೊನೆಯಾಗಿದ್ದು, ಜೂನ್ 8 ರಿಂದ ಬಿಜೆಪಿಯ ಶಾಸಕರ ಕಚೇರಿ, ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕ್ ನಿರ್ಬಂಧ ಕುರಿತು ರಾಜ್ಯ ಸರ್ಕಾರ ಅಧಿಕೃತವಾಗಿ ಸುತ್ತೋಲೆ ಪ್ರಕಟಿಸಿ. ಮೈಕ್ ಬಳಸಲು ಧಾರ್ಮಿಕ ಕೇಂದ್ರಗಳು ಅನುಮತಿ ಪಡೆಯಬೇಕು. ರಾತ್ರಿ 10 ಗಂಟೆ ಬಳಿಕ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿಯಮ ಪಾಲನೆ ಮಾಡದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿ ಹದಿನೈದು ದಿನಗಳ ಗಡವು ನೀಡಿತ್ತು. ಆದರೆ ಈವರೆಗೆ ಯಾವುದೇ ನಿಯಮಗಳು ಜಾರಿಯಾಗಿಲ್ಲ. ಸರ್ಕಾರದ ಸುತ್ತೋಲೆ ಕಸದ ಬುಟ್ಟಿಗೆ ಸೇರಿವೆ ಹೀಗಾಗಿ ಶ್ರೀರಾಮ ಸೇನೆ ಸೇರಿದಂತೆ ಹತ್ತಕ್ಕಿಂತ ಹೆಚ್ಚು ಹಿಂದೂಪರ ಸಂಘಟನೆಗಳ ಸಹಯೋಗದಲ್ಲಿ ಮೈಕ್ ತೆರವಿನ ಹೋರಾಟ ಮುಂದುವರಿಸಲಾಗುತ್ತಿದೆ ಎಂದು ಮುತಾಲಿಕ್ ತಿಳಿಸಿದರು.


Spread the love

About Laxminews 24x7

Check Also

ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆ

Spread the love  ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಳಗಾವಿ ಸಮೀಪದ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ, ಮಹಿಳಾ ಸ್ವಾವಲಂಬಿ ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ