Breaking News

ದಕ್ಷಿಣ ಕನ್ನಡದಲ್ಲಿ ಕಟ್ಟಡವೊಂದರ ಮೇಲಿಂದ ಸುರಿಯಿತು ಹಣದ ಮಳೆ!

Spread the love

ಬಂಟ್ವಾಳ(ದಕ್ಷಿಣ ಕನ್ನಡ): ಬಿ.ಸಿ.ರೋಡ್​ನ ಹೃದಯಭಾಗದಲ್ಲಿರುವ ಕಟ್ಟಡವೊಂದರ ಕೊಠಡಿಯಿಂದ ಗುರುವಾರ ಹಣದ ಮಳೆ ಸುರಿದಿದೆ!

ಕಟ್ಟಡದ ಮೇಲಿಂದ ಹಣ ಬೀಳುವುದನ್ನು ಕಂಡ ಜನ ಹಣ ಹೆಕ್ಕಲು ಮುಗಿಬಿದ್ದಿದ್ದರಿಂದ ಕೆಲಕಾಲ ಸರ್ವೀಸ್​ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

 

ಬಿ.ಸಿ.ರೋಡ್​ನ ಕಟ್ಟಡದಲ್ಲಿ ನಡೆಯುತ್ತಿದ್ದ ರಿಕ್ರಿಯೇಶನ್​ ಕ್ಲಬ್​ನಲ್ಲಿ ಅಕ್ರಮ ಜೂಜಾಟ ನಡೆಯುತ್ತಿರುವ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆ ಸಹಾಯಕ ಪೊಲೀಸ್​ ಅಧೀಕ್ಷಕರ ಅನುಮತಿ ಪಡೆದು ಪೊಲೀಸ್​ ನಿರೀಕ್ಷಕ ವಿವೇಕಾನಂದ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. 28 ಆರೋಪಿಗಳು ಅಕ್ರಮ ಜೂಜಾಟದಲ್ಲಿ ತೊಡಗಿದ್ದರು. ಪೊಲೀಸ್​ ದಾಳಿಯಿಂದ ಆತಂಕಕ್ಕೊಳಗಾದ ಕೆಲವರು ಕಿಟಕಿಗಳ ಮೂಲಕ ನೋಟುಗಳನ್ನು ಕೆಳಗೆ ಎಸೆದಿದ್ದು, ನೋಟುಗಳು ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಕಟ್ಟಡದ ಮೇಲಿಂದ ಹಣ ಬೀಳುವುದನ್ನು ಕಂಡ ಜನ ನೋಟುಗಳನ್ನು ಆಯ್ದುಕೊಳ್ಳಲು ನಾ ಮುಂದು- ತಾ ಮುಂದು ಎಂಬಂತೆ ಮುಗಿಬಿದ್ದಿದ್ದರು. ಅತ್ತ ಪೊಲೀಸರು ಆರೋಪಿಗಳನ್ನು ಬಂಧಿಸಿ 26,900 ರೂ. ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ