Breaking News
Home / ರಾಜಕೀಯ / ಪಿಎಸ್‍ಐ ನೇಮಕಾತಿ ಅಕ್ರಮ- ಮತ್ತೋರ್ವನ ಬಂಧನ, ಬಂಧಿತ ಆರೋಪಿಗಳ ಸಂಖ್ಯೆ 39ಕ್ಕೆ ಏರಿಕೆ

ಪಿಎಸ್‍ಐ ನೇಮಕಾತಿ ಅಕ್ರಮ- ಮತ್ತೋರ್ವನ ಬಂಧನ, ಬಂಧಿತ ಆರೋಪಿಗಳ ಸಂಖ್ಯೆ 39ಕ್ಕೆ ಏರಿಕೆ

Spread the love

ಕಲಬುರಗಿ: ಪಿಎಸ್‍ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧನ ಮಾಡಿದ್ದಾರೆ.

ಜಿಲ್ಲೆಯ ಜೇವರ್ಗಿ ತಾಲೂಕಿನ ವಸಂತರಾಯ್ ನರಿಬೋಳ ಬಂಧನವಾದ ಇನ್ನೋರ್ವ ಆರೋಪಿಯಾಗಿದ್ದು, ಇಲ್ಲಿಯವರೆಗೆ ಅಕ್ರಮದಲ್ಲಿ ಭಾಗಿಯಾಗಿ ಬಂಧನವಾದ ಆರೋಪಿಗಳ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.

ವಸಂತರಾಯ್, ಅಭ್ಯರ್ಥಿ ಎನ್.ವಿ.ಸುನೀಲ್ ಕುಮಾರ್ ತಂದೆಯಾಗಿದ್ದು, ಸುನೀಲ್ ನನ್ನ ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಕ್ಕೆ ಆರ್.ಡಿ.ಪಾಟೀಲ್ ಮೊರೆ ಹೋಗಿದ್ದರು.

ಇತ್ತೀಚೆಗಷ್ಟೇ ಪಿಎಸ್‍ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಅಭ್ಯರ್ಥಿಯಾಗಿದ್ದ ಶಾಂತಿಬಾಯಿ ಹಾಗೂ ಪತಿ ಬಸಯ್ಯಾ ನಾಯಕ ಎರಡು ತಿಂಗಳ ಬಳಿಕ ಸಿಐಡಿ ಬಲೆಗೆ ಬಿದ್ದಿದ್ದರು. ಹೈದರಾಬಾದ್‍ನಲ್ಲಿ ಸಿಐಡಿ ಪೊಲೀಸರು ಶಾಂತಿಬಾಯಿ ಹಾಗೂ ಆಕೆಯ ಪತಿ ಬಸಯ್ಯಾ ನಾಯಕ್‍ನನ್ನು ಬಂಧಿಸಿದ್ದರು. 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ