Breaking News

ಲಾ ಆ್ಯಂಡ್ ಆರ್ಡರ್ ಭದ್ರತೆಗೆ ನಿರ್ಧಾರ:

Spread the love

ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಚ್ಚ ನ್ಯಾಯಾಲಯದ ಆದೇಶದ ಮೇಲೆ 11 ಪ್ರಕರಣಕ್ಕೆ ತಡೆಯಾಜ್ಞೆ ಬಂದಿದೆ. ಉಳಿದ ಪ್ರಕರಣ ತನಿಖೆಯ ಹಂತದಲ್ಲಿದೆ. ಕಾನೂನು ಮತ್ತು ಸುವ್ಯವಸ್ಥೆ ಭದ್ರ ಪಡಿಸಲು ಮತ್ತಷ್ಟು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕಕುಮಾರ್ ಹೇಳಿದರು.

ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಪ್ರಕರಣಕ್ಕೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಇದೇ 07ರಂದು ಹೀಯರಿಂಗ್ ಇದೆ. ಅಲ್ಲದೇ ಮುಂದಿನ ಕ್ರಮಗಳನ್ನು ಪೊಲೀಸ್ ಆಯುಕ್ತರು ಕೈಗೊಳ್ಳುತ್ತಾರೆ ಎಂದರು.ಪ್ರಮೋದ್ ಮುತಾಲಿಕ್ ಹೇಳಿಕೆ ಹಾಗೂ ಧ್ವನಿವರ್ಧಕಗಳ ಕುರಿತಾದ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಧ್ವನಿವರ್ಧಕಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ಏನು ಕ್ರಮಗಳನ್ನು ಕೈಗೊಳ್ಳಬೇಕು ಅದನ್ನು ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಹದಗೆಟ್ಟ ರಸ್ತೆ ಸುಧಾರಣೆ ಸೇರಿದಂತೆ ವಿವಿಧ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪಾಲಿಕೆ ಆಯುಕ್ತರಿಗೆ ಮನವಿ

Spread the love ಬೆಳಗಾವಿ : ಹದಗೆಟ್ಟ ರಸ್ತೆ ಸುಧಾರಣೆ ಸೇರಿದಂತೆ ವಿವಿಧ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪಾಲಿಕೆ ಆಯುಕ್ತರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ