Breaking News

ಬೈಕ್ ಸಮೇತ ಕೆರೆಗೆ ಬಿದ್ದು ಸವಾರ ಸಾವು

Spread the love

ಹಾವೇರಿ: ತಿರುವೊಂದರಲ್ಲಿ ಸಂಭವಿಸಿದ ಅಪಘಾತದಿಂದಾಗಿ ಸವಾರನೊಬ್ಬ ಬೈಕ್​ ಸಮೇತ ಕೆರೆಗೆ ಬಿದ್ದು ಸಾವಿಗೀಡಾಗಿದ್ದಾನೆ. ಹಾವೇರಿ ಜಿಲ್ಲೆಯಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.

ಬಾಷಾಸಾಬ್​ ಜಿಗಳೂರ (49) ಅಪಘಾತದಲ್ಲಿ ಸಾವಿಗೀಡಾದ ಬೈಕ್ ಸವಾರ.

ಬಾಷಾಸಾಬ್​ ಸವಣೂರು ಪಟ್ಟಣದ ಕಡೆಯಿಂದ ಹಾವೇರಿಯತ್ತ ಸಾಗುತ್ತಿದ್ದಾಗ ಸವಣೂರು ತಾಲೂಕಿನ ಕಲ್ಮಡವು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.

ಕಲ್ಮಡವು ಗ್ರಾಮದ ಬಳಿ ತಿರುವು ಇದ್ದಿದ್ದರಿಂದ ತಕ್ಷಣಕ್ಕೆ ಬೈಕ್​ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಆಗದೆ ಅದು ಸೀದಾ ರಸ್ತೆ ಪಕ್ಕದ ಕೆರೆಗೆ ಹೋಗಿ ಬಿದ್ದಿದೆ. ಸ್ಥಳೀಯರು ಶವವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ.


Spread the love

About Laxminews 24x7

Check Also

ಒಂದು ಸಾವಿರ ಪಿಎಸ್ಐ ಹುದ್ದೆ ಖಾಲಿ, ಶೀಘ್ರವೇ ನೇಮಕಾತಿ: ಸಚಿವ ಪರಮೇಶ್ವರ್

Spread the loveಕೊಪ್ಪಳ: ಪಿಎಸ್ಐ ನೇಮಕಾತಿ ಹಗರಣದ ಬಳಿಕ ಐದು ವರ್ಷಗಳ ಕಾಲ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ. ಒಂದು ಸಾವಿರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ