Breaking News

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಮಾನತ್ತು ಮಾಡಿ:: ದಲಿತ ಸಂಘರ್ಷ ಸಮಿತಿ ಆಗ್ರಹ

Spread the love

ರಾಜ್ಯದಲ್ಲಿ ಪಠ್ಯ ಮರು ಪರಿಷ್ಕರಣೆ ಮಾಡಿ ಹೊಸದಾಗಿ ಪಠ್ಯವನ್ನು ಮುದ್ರಣ ಮಾಡಬೇಕು. ಅದೇ ರೀತಿ ಪಠ್ಯದಲ್ಲಿ ಕೇಸರೀಕರಣ ಮಾಡಲು ಮುಂದಾಗಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಶಾಲಾ ಶಿಕ್ಷಣ ಸಂಪೂರ್ಣ ಅವೈಜ್ಞಾನಿಕ, ಅಸಂವಿಧಾನಾತ್ಮಕ ಹಾಗೂ ಅನೈತಿಕಗೊಳಿಸಲು ಹೊರಟಿರುವ ಪಠ್ಯಪುಸ್ತಕ ಮರು ಪರಿಶೀಲನೆಗಾಗಿ ಪಠ್ಯವನ್ನು ವಾಪಸ್ಸು ಪಡೆಯುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಬೆಳಗಾವಿಯ ಡಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಯಾವುದೇ ಶಾಲೆ, ಕಾಲೇಜಿನಲ್ಲಿ ಪಾಠ ಮಾಡುವ ಅರ್ಹತೆ ಹೊಂದಿಲ್ಲ. ಸಮಿತಿಯ ಒಬ್ಬರನ್ನು ಹೊರತು ಪಡಿಸಿ ಇನ್ನುಳಿದ ಎಲ್ಲರೂ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಿದ್ದಾರೆ. ರೋಹಿತ್ ಚಕ್ರತೀರ್ಥ ಅಶ್ಲೀಲ, ಅಸಭ್ಯ ಹಾಗೂ ವಿಕೃತ ನಡುವಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ವ್ಯಕ್ತಿಯಾಗಿದ್ದಾನೆ.

Spread the love

About Laxminews 24x7

Check Also

ಶಾಸಕ ಭರಮಗೌಡ (ರಾಜು) ಕಾಗೆಗೆ ಒಲಿದು ಬಂದ ಅದೃಷ್ಟ

Spread the love  ಸಚಿವ ಸತೀಶ್ ಜಾರಕಿಹೊಳಿಯವರ ಮಧ್ಯಸ್ಥಿಕೆಯಲ್ಲಿ ನಡೆದ ಕಾಗವಾಡ ಕ್ಷೇತ್ರದ ಅವಿರೋಧ ಆಯ್ಕೆ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ