Breaking News
Home / ಜಿಲ್ಲೆ / ಬೆಳಗಾವಿ / ‘ಕಾಂಗ್ರೆಸ್ಸಿನಲ್ಲಿ ಹಿಡಿತ ಸಾಧಿಸುವ ಉದ್ದೇಶದಿಂದ ಸಿದ್ದರಾಮಯ್ಯ ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ.: ಕಟೀಲ್

‘ಕಾಂಗ್ರೆಸ್ಸಿನಲ್ಲಿ ಹಿಡಿತ ಸಾಧಿಸುವ ಉದ್ದೇಶದಿಂದ ಸಿದ್ದರಾಮಯ್ಯ ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ.: ಕಟೀಲ್

Spread the love

ಬೆಳಗಾವಿ: ‘ಕಾಂಗ್ರೆಸ್ಸಿನಲ್ಲಿ ಹಿಡಿತ ಸಾಧಿಸುವ ಉದ್ದೇಶದಿಂದ ಸಿದ್ದರಾಮಯ್ಯ ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಕಾಂಗ್ರೆಸ್ಸಿಗರೇ ಮುಜುಗರಕ್ಕೆ ಒಳಗಾಗಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

 

ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಒಳಜಗಳದಿಂದ ಕಾಂಗ್ರೆಸ್ಸಿಗರ ಆತ್ಮವಿಶ್ವಾಸ ಕುಗ್ಗಿದೆ. ಹೀಗಾಗಿ ಪಕ್ಷ ಬಿಟ್ಟು ಹೋಗುವವರ ಸಂಖ್ಯೆ ಹೆಚ್ಚುತ್ತಿದೆ’ ಎಂದರು.

‘ಕಾಂಗ್ರೆಸ್ ಚಿಂತನಾ ಶಿಬಿರ ಮುಗಿದ ಮೇಲೆ 60ಕ್ಕೂ ಹೆಚ್ಚು ರಾಷ್ಟ್ರಮಟ್ಟದ ನಾಯಕರು ಆ ಪಕ್ಷ ತೊರೆದಿದ್ದಾರೆ. ರಾಜ್ಯದಲ್ಲಿ ಕೂಡ ಇದೇ ಸ್ಥಿತಿ ಇದೆ. ಈಗಾಗಲೇ ಮುಖ್ಯಮಂತ್ರಿ ಚಂದ್ರು, ಬ್ರಿಜೀಶ್ ಕಾಳಪ್ಪ, ಸುದರ್ಶನ್ ಅವರಂಥ ಹಿರಿಯ ನಾಯಕರು ಕೂಡ ಪಕ್ಷದಿಂದ ಕಾಲು ಹೊರಗಿಟ್ಟಿದ್ದಾರೆ’ ಎಂದೂ ಕಟೀಲ್ ಹೇಳಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ