Breaking News
Home / ರಾಜಕೀಯ / ಸಿಡಿಲು ಬಡಿದು ಮಹಿಳೆ ಸಾವು : ಏಳು ಜನರಿಗೆ ಗಂಭೀರ ಗಾಯ

ಸಿಡಿಲು ಬಡಿದು ಮಹಿಳೆ ಸಾವು : ಏಳು ಜನರಿಗೆ ಗಂಭೀರ ಗಾಯ

Spread the love

ರಟ್ಟೀಹಳ್ಳಿ : ಪಟ್ಟಣದ ಹೊರವಲಯದ ಜಮೀನೊಂದರಲ್ಲಿ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದ ವೇಳೆ ಮಂಗಳವಾರ ಸಂಜೆ ಸಿಡಿಲು ಬಡಿದು ಮಹಿಳೆ ಸಾವಿಗೀಡಾಗಿದ್ದು ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಟ್ಟಣದ ಕೋಟೆ ನಿವಾಸಿ ಕರಿಯಮ್ಮ ರಂಗಪ್ಪ ಪರಸಪ್ಪನವರ (35) ಮೃತರು.

ಲತಾ ಮಾರುತೆಪ್ಪ ಸುಣಗಾರ, ಮಾರುತೆಪ್ಪ ಸುಣಗಾರ, ಸುಧಾ ಪರಸಪ್ಪನವರ, ರತ್ನಾ ಉಪ್ಪಾರ, ಸಾಕಮ್ಮ ಸುಣಗಾರ, ರವೀಂದ್ರ ಪರಸಪ್ಪನವರ, ಜುಬೇದಾ ಬಾಗಲಮನಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ರಟ್ಟೀಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹಾವೇರಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.

ಗಣ್ಯರ ಭೇಟಿ : ವಿಷಯ ತಿಳಿಯುತ್ತಲೇ ಸ್ಥಳಕ್ಕೆ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಜಯಾನಂದ ಜಾವಣ್ಣನವರ, ದೇವರಾಜ ನಾಗಣ್ಣನವರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಡಿ. ಬಸನಗೌಡ್ರ ಭೇಟಿ ನೀಡಿ ಗಾಯಾಳುಗಳಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ಸ್ಥಳದಲ್ಲಿ ರಟ್ಟೀಹಳ್ಳಿ ತಹಶೀಲ್ದಾರ್‌ ಅರುಣಕುಮಾರ ಕಾರಗಿ, ಪಿಎಸ್‌ಐ ಕೃಷ್ಣಪ್ಪ ತೋಪಿನ,ಕಂದಾಯ ಅಧಿಕಾರಿಗಳು ಹಾಜರಿದ್ದರು.

ಜೆಡಿಎಸ್ನ ಜಯಾನಂದ ಜಾವಣ್ಣನವರ ಮೃತ ಕುಟುಂಬಕ್ಕೆ ಸ್ಥಳದಲ್ಲಿಯೇ ಪರಿಹಾರ ಹಣವಾಗಿ ₹5 ಸಾವಿರ ನೀಡಿದರು. ‘ಸಿಡಿಲಿನಿಂದ ಮೃತಪಟ್ಟ ಕುಟುಂಬಸ್ಥರಿಗೆ ಸರ್ಕಾರ ₹25 ಲಕ್ಷ ಪರಿಹಾರದ ಹಣ ನೀಡಬೇಕು. ಅಲ್ಲದೇ ಗಾಯಾಳುಗಳಿಗೆ ₹5 ಲಕ್ಷ ಪರಿಹಾರ ನೀಡಬೇಕು’ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ