ಬೇತಿಯಾ(ಬಿಹಾರ): ದೇಶದಲ್ಲಿ ನಿರ್ಭಯಾ ಘಟನೆಯಂತಹ ಅತ್ಯಾಚಾರಗಳು ಬೆಳಕಿಗೆ ಬರುತ್ತಲೇ ಇವೆ.
ಇದರ ವಿರುದ್ಧ ಪೊಲೀಸ್ ಇಲಾಖೆ ಎಷ್ಟೇ ಕಠಿಣ ಕ್ರಮಗಳನ್ನು ಕೈಗೊಂಡರೂ ಆರೋಪಿಗಳು ಮಾತ್ರ ತಮ್ಮ ದುರಾಭ್ಯಾಸ ಮುಂದುವರಿಸುತ್ತಲೇ ಇದ್ದಾರೆ. ನಿರ್ಭಯಾದಂತಹ ಅತ್ಯಾಚಾರವೊಂದು ಬಿಹಾರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಅಮಲು ಪದಾರ್ಥ ನೀಡಿ ಅತ್ಯಾಚಾರ: ಪಾಟ್ನಾಗೆ ಕರೆದುಕೊಂಡು ಹೋಗುವುದಾಗಿ ಹೇಳಿ ಹೆಲ್ಪರ್ಬಸ್ನಲ್ಲಿ ಕೂರಿಸಿದ್ದಾನೆ. ನಂತರ ಬಸ್ ನಿಲ್ದಾಣದಿಂದ ಚಾಲಕ ಬಸ್ ಅನ್ನು ಬೈಪಾಸ್ ರಸ್ತೆಗೆ ತೆಗೆದುಕೊಂಡು ಹೋಗಿದ್ದಾನೆ. ಈ ಅನುಕ್ರಮದಲ್ಲಿ ಆರೋಪಿಗಳು ಬಾಲಕಿಗೆ ಪಾನೀಯದಲ್ಲಿ ಅಮಲು ಬೆರೆಸಿ ಕುಡಿಸಿದ್ದಾರೆ. ಬಾಲಕಿ ಪ್ರಜ್ಞೆ ತಪ್ಪಿದ ಬಳಿಕ ಬಸ್ನಲ್ಲೇ ಒಬ್ಬರು ಬಳಿಕ ಒಬ್ಬರು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಬಸ್ನೊಳಗೆ ಬೀಗ ಹಾಕಿ ಆರೋಪಿಗಳು ಪರಾರಿ: ಅತ್ಯಾಚಾರದ ಬಳಿಕ ಕಂಡಕ್ಟರ್, ಚಾಲಕ ಮತ್ತು ಹೆಲ್ಪರ್ ಸಂತ್ರಸ್ತೆಯನ್ನು ಬಸ್ನಲ್ಲಿಟ್ಟು ಬೀಗ ಹಾಕಿ ಪರಾರಿಯಾಗಿದ್ದಾರೆ. ಬಾಲಕಿಗೆ ಪ್ರಜ್ಞೆ ಬಂದಾಗ ಒಳಗಿನಿಂದ ಬಸ್ನ ಬಾಗಿಲು ಬಡಿದಿದ್ದಾಳೆ. ಈ ವೇಳೆ, ದಾರಿಹೋಕರು ಬಸ್ನ ಬಾಗಿಲು ತೆರೆದು ಸ್ಥಳೀಯ ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಬಾಲಕಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ನನಗೆ ಸಾರಾಯಿ ಕುಡಿಸಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿ ದೂರು ನೀಡಿದ್ದಾರೆ.