Breaking News
Home / ರಾಜಕೀಯ / ಅತಿ ವೇಗವಾಗಿ ಬಂದ ಕಾರೊಂದು ಕಾಂಪೌಂಡ್‍ಗೆ ಡಿಕ್ಕಿ

ಅತಿ ವೇಗವಾಗಿ ಬಂದ ಕಾರೊಂದು ಕಾಂಪೌಂಡ್‍ಗೆ ಡಿಕ್ಕಿ

Spread the love

ಬೆಂಗಳೂರು: ಅತಿ ವೇಗವಾಗಿ ಬಂದ ಕಾರೊಂದು ಕಾಂಪೌಂಡ್‍ಗೆ ಡಿಕ್ಕಿ ಹೊಡೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ರಾಜ್‍ಭವನ ರಸ್ತೆಯಲ್ಲಿ ನಡೆದಿದೆ.

ನಸುಕಿನ ಜಾವ ಸುಮಾರು 3 ಗಂಟೆ ವೇಳೆಗೆ ಕಾರೊಂದು ರಾಜ್‍ಭವನ ರಸ್ತೆಯಲ್ಲಿರುವ ಪ್ರಸಾರ ಭಾರತಿ ಗೋಡೆಗೆ ಡಿಕ್ಕಿ ಹೊಡೆದಿದೆ. ಚಾಲಕ ಕಾರನ್ನು ಅತಿ ವೇಗವಾಗಿ ಚಲಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ತಿರುವಿನಲ್ಲಿ ಕಾಂಪೌಂಡ್ ಒಳಗಡೆ ನುಗ್ಗಿಸಿದ್ದಾನೆ. ಘಟನೆಯಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸದ್ಯ ಕಾಂಪೌಂಡ್ ಮೇಲಿಂದ ಕಾರನ್ನು ತೆರವುಗೊಳಿಸಲಾಗಿದೆ. ಘಟನೆ ಸಂಬಂಧಿಸಿ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. 


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ