ಬೆಳಗಾವಿ: ಸಚಿವ ಸಂಪುಟದಲ್ಲಿ ಹಿರಿಯ ಶಾಸಕ ಉಮೇಶ ಕತ್ತಿ ಸೇರ್ಪಡೆಯಾದರೆ ಸ್ವಾಗತಿಸುವುದಾಗಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾದ್ಯಮದವರೊಂದಿಹೆ ಮಾತನಾಡಿದ ಅವರು, ಉಮೇಶ ಕತ್ತಿ ಅವರು ನಮ್ಮ ಹಳೆಯ ಸ್ನೇಹಿತರು. ಅವರು ಮಂತ್ರಿಯಾಗಲಿ ಎಂಬುವುದು ನಮ್ಮ ಅಪೇಕ್ಷೆ . ಸಚಿವ ಸಂಪುಟ ಯಾವಾಗ ವಿಸ್ತರಣೆ ಆಗುತ್ತದೆ ಎಂಬ ಮಾಹಿತಿ ಇಲ್ಲ. ಮುಖ್ಯಮಂತ್ರಿಗಳನ್ನು ಕೇಳಿ ಹೇಳುವುದಾಗಿ ತಿಳಿಸಿದರು.
ಡಿಸಿಸಿ ಬ್ಯಾಂಕ್ ವಿಚಾರವಾಗಿ ಪ್ರತಿಕ್ರಿಯಿಸಿ, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಗುಂಪುಗಾರಿಕೆ ರಾಜಕಾರಣದಲ್ಲಿ ಎಲ್ಲರಿಗೂ ಆಸೆ ಆಕ್ಷಾಂಕೆ ಇರುವುದು ಸಹಜ ಎಂದರು.