Breaking News

ರಬಕವಿ-ಬನಹಟ್ಟಿ ಕಸಾಯಿಖಾನೆಗೆ ಅಕ್ರಮ ಗೋವು ಸಾಗಾಟ; ಆರೋಪಿಗಳು ಪೊಲೀಸ್ ವಶಕ್ಕೆ

Spread the love

ರಬಕವಿ-ಬನಹಟ್ಟಿ: ತಾಲೂಕಿನ ಬನಹಟ್ಟಿಯ ಬಿಲಾಲ್ ಮಸೀದಿ ಪಕ್ಕದಲ್ಲಿರುವ ಅನಧಿಕೃತ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಗೋವುಗಳನ್ನು ಕರೆತಂದು ಕಸಾಯಿಖಾನೆಗೆ ಕಳಿಸಲಾಗುತ್ತಿರುವುದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸಾಗಾಟ ಮಾಡುತ್ತಿದ್ದ ಆರೋಪಿಗಳ ಸಮೇತ ಗೋವುಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

 

ಜಮಖಂಡಿಯ ದನದ ಮಾರುಕಟ್ಟೆಯಿಂದ ಅಕ್ರಮವಾಗಿ ಕಸಾಯಿಖಾನೆಗೆ ಗೋವು ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬನಹಟ್ಟಿ ಪಿಎಸ್‌ಐ ಸುರೇಶ ಮಂಟೂರ ಹಾಗು ಕ್ರೈಂ ಪಿಎಸ್‌ಐ ಪುರಂದರ ಪೂಜಾರಿ ನೇತೃತ್ವದಲ್ಲಿ ಪೇದೆಗಳಾದ ಮಹೇಶ ಹಣಗಂಡಿ, ಶ್ರೀಶೈಲ ಬಾಡಗಿ, ವಸಂತ ಜಾಧವ, ಬಸವರಾಜ ಮಾಳಿ ದಾಳಿ ನಡೆಸಿ, ವಾಹನ ಮತ್ತು 7 ಗೋವುಗಳನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳಾದ ಮುಸ್ತಾನ ಮುಗುಡುಸಾಬ ಬೇಪಾರಿ ಹಾಗು ಸಂಗಪ್ಪ ಮಾರುತಿ ಎಂಬುವರನ್ನು ಬಂಧಿಸಿ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


Spread the love

About Laxminews 24x7

Check Also

ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..!

Spread the loveಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! ಉತ್ತರ ಪ್ರದೇಶದ ಬದೋಹಿಯಲ್ಲೊಂದು ಪುಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ