Breaking News

ಇಬ್ಬರು ಖತರ್ನಾಕ್ ಆರೋಪಿಗಳನ್ನು ಬಂಧಿಸಿದ ನಿಪ್ಪಾಣಿ ಠಾಣೆ ಪೊಲೀಸರು

Spread the love

ಮನೆಗಳುವು ಹಾಗೂ ಮೋಟಾರ್ ಸೈಕಲ್ ಸ್ಪೇರ್ ಪಾರ್ಟ್ಸ್ ಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಿಪ್ಪಾಣಿ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು 27 ವರ್ಷದ ನಿಹಾಲ ಅಸ್ಲಾಂ ಬಾಲೇಖಾನ ಹಾಗೂ 47 ವರ್ಷದ ರಮೀಜಾ ದಸ್ತಗೀರ ಮಲ್ನೋಡಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಂದು ಕಾರು, ಬೈಕ್ ಸ್ಪೇರ್ ಪಾರ್ಟ್ಸ್, ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದು, ಒಟ್ಟು 4,13,000 ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.ಬೆಳಗಾವಿ ಎಸ್.ಪಿ. ಲಕ್ಷ್ಮಣ ನಿಂಬರಗಿ ಹಾಗೂ ಹೆಚ್ಚುವರಿ ಎಸ್ ಪಿ ಮಹಾನಂದ ನಂದಗಾಂವಿ ಮಾರ್ಗದರ್ಶನದಲ್ಲಿ ಚಿಕ್ಕೋಡಿ ಡಿಎಸ್ ಪಿ ಬಸವರಾಜ್ ಯಲಿಗಾರ ಅವರ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಖತರ್ನಾಕ್ ಆರೋಪಿಗಳನ್ನು ಬಂಧಿಸಿದ್ದಾರೆ.

ನಿಪ್ಪಾಣಿ ಸಿಪಿಐ ಸಂಗಮೇಶ ಶಿವಯೋಗಿ, ಪಿಎಸ್ ಐ ಕೃಷ್ಣವೇಣಿ, ಎ ಎಸ್ ಐ ಎಂ.ಜಿ.ಮುಜಾವರ, ಹೆಚ್ ಸಿ ಆರ್.ಜಿ.ದಿವಟೆ, ಎಂ.ಬಿ.ಕಲ್ಯಾಣಿ, ಪಿ.ಎಂ.ಗಸ್ತಿ, ಸಿಪಿಐ ಎಂ.ಬಿಬೋಯಿ, ವಿ.ಎಸ್.ಅಸೋದೆ, ಎಸ್.ಜಿ ಮುಲ್ಲಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ್ಯಾಲಿ. ಧರ್ಮಸ್ಥಳದ ಭಕ್ತಾಭಿಮಾನಿಗಳ ವೇದಿಕೆಯಿಂದ ಹೋರಾಟ

Spread the love ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ, ಅಪಪ್ರಚಾರ ವಿಚಾರ ಕುಂದಾನಗರಿ ಬೆಳಗಾವಿಯಲ್ಲಿ ಧರ್ಮಸ್ಥಳ ಭಕ್ತರಿಂದ ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ