Breaking News

ರಾಷ್ಟ್ರಪತಿ ಚುನಾವಣೆಗೆ ತಯಾರಿ ಜೋರು! ಮಲ್ಲಿಕಾರ್ಜುನ ಖರ್ಗೆ ಕಣಕ್ಕೆ?

Spread the love

ದೇಶದಲ್ಲಿ ರಾಷ್ಟ್ರಪತಿ ಚುನಾವಣೆ ಘೋಷಣೆ ಆಗ್ತಿದ್ದಂತೆ ಆಡಳಿತ ರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳು ಅಭ್ಯರ್ಥಿಯ ಹುಡುಕಾಟದಲ್ಲಿ ನಿರತವಾಗಿವೆ. ಅದರಲ್ಲೂ ಕಾಂಗ್ರೆಸ್‌ ಇನ್ನಿತರ ಪ್ರತಿಪಕ್ಷಗಳ ಜೊತೆಗೆ ಸೇರಿ ಬಿಜೆಪಿಗೆ ತಕ್ಕ ಪ್ರತಿಸ್ಪರ್ಧಿಯನ್ನ ಕಣಕ್ಕಿಳಿಸೋಕೆ ತಯಾರಿ ನಡೆಸ್ತಿದೆ.

ಇನ್ನು ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯನ್ನ ಕಣಕ್ಕಿಳಿಸಬಹುದು ಅನ್ನೋ ವರದಿಗಳು ಬಲವಾಗಿ ಕೇಳಿ ಬರ್ತಿವೆ. ಮತ್ತೊಂದು ಕಡೆ ಕಾಂಗ್ರೇಸ್ಸೇತರರನ್ನ ರಾಷ್ಟ್ರಪತಿಯನ್ನಾಗಿಸೋಕೆ ಚಿಂತನೆ ನಡೆಸಲಾಗ್ತಿದೆ ಅಂತ ಕೂಡ ಹೇಳಲಾಗ್ತಿದೆ. ಆದ್ರೆ ಅಧಿಕೃತವಾಗಿ ಯಾವುದೇ ಪಕ್ಷ ಕೂಡ ಈ ಬಗ್ಗೆ ಸುಳಿವು ಬಿಟ್ಟುಕೊಟ್ಟಿಲ್ಲ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ CPM, NCP, TMC ಮುಖ್ಯಸ್ಥರ ಜೊತೆಗೆ ಮಾತಾನಾಡಿದ್ದಾರೆ ಅಂತ ವರದಿಯಾಗಿದೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ