Breaking News

ಹೊರಟ್ಟಿ ಮೇಲೆ ಕೇಸ್, ನೋಟಿಸ್ :R.C. ಆದಿತ್ಯಾ ಬಿಸ್ವಾಸ್

Spread the love

ವಿಧಾನಪರಿಷತ್ ಚುನಾವಣೆ ಹಿನ್ನೆಲೆ ನೀತಿಸಂಹಿತೆ ಉಲ್ಲಂಘನೆ ಕೇಸ್‍ನಡಿ ಐದು ಸೀಜ್‍ಗಳಾಗಿವೆ. ಇದು ಬಿಟ್ಟು ಎರಡು ಮೇಜರ್ ದೂರು ಬಂದಿವೆ, ಕೆಲವು ಸಣ್ಣಪುಟ್ಟ ದೂರುಗಳನ್ನು ನಾವು ಇತ್ಯರ್ಥ ಮಾಡಿದ್ದೇವೆ ಎಂದು ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯಾ ಬಿಸ್ವಾಸ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯಾ ಬಿಸ್ವಾಸ್ ಅವರು ಬಾಗಲಕೋಟೆಯಿಂದ ಓರ್ವ ವ್ಯಕ್ತಿ ತಮಗೆ ಬೆದರಿಕೆ ಹಾಕಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಸುಭಾಷ ಕೋಟೆ ಆಡಿಯೋ ಕ್ಲಿಪ್ ಕಳಿಸಿದ್ದಾರೆ. ಆ ಕುರಿತು ಬಾಗಲಕೋಟೆ ಎಸ್‍ಪಿಗೆ ತಿಳಿಸಿದ್ದು, ಅವರು ತನಿಖೆ ನಡೆಸಿ, ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಬಸವರಾಜ ಪಥ ಎಂಬ ಪುಸ್ತಕವನ್ನು ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಪ್ರಕಟಿಸಿತ್ತು. ಈ ಪುಸ್ತಕದ ಮುಖ ಪುಟದ ಮೇಲೆ ರಾಷ್ಟ್ರೀಯ ಲಾಂಭನ, ಪರಿಷತ್ ಸಭಾಪತಿ ಪೀಠದ ದುರ್ಬಳಕೆ ಆರೋಪ ಹಿನ್ನೆಲೆ ದೂರು ಬಂದಿದೆ. ಹೀಗಾಗಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಗೆ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿದ್ದೇವೆ ಎಂದರು.


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ